ರಾಜ್ಯ

ಗ್ಯಾರಂಟಿಗಳಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಯ್ತು: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್‌ನಲ್ಲಿ ಮೀಸಲಿಟ್ಟ 52,009 ಕೋಟಿ ರೂ ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಗದಿತ ಸಮಯಕ್ಕೆ ಗ್ಯಾರಂಟಿಗಳು ತಲುಪುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಮತ್ತು ಸರ್ಕಾರದ ಒಳಗಡೆ ಗ್ಯಾರಂಟಿ ಕೊಡಬೇಕೇ ಬೇಡವೇ ಎಂಬ ವಿಚಾರ ಚರ್ಚೆಯಲ್ಲಿದೆ. ಈ ಕಾರಣದಿಂದ ಜನರಿಗೆ ಅನುಮಾನ ಬರುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ದಲಿತ ಹಣ 25 ಸಾವಿರ ಕೋಟಿಯನ್ನೂ ನುಂಗಿದ್ದೀರಿ. 52 ಸಾವಿರ ಕೋಟಿಯನ್ನು ಬಜೆಟ್‌ನಲ್ಲಿ ಇಟ್ಟಿದ್ದೀರಿ. 6 ತಿಂಗಳಿನಿಂದ ಅಕ್ಕಿ ಕೊಡುವುದಕ್ಕೂ ತಿಲಾಂಜಲಿ ಹಾಡಿದ್ದಾರೆ. ಮನೆ ಒಡತಿಗೆ ಕೊಡುತ್ತಿದ್ದ 2 ಸಾವಿರ ರೂ ಬರುತ್ತಿಲ್ಲ. ಯುವನಿಧಿ ಮರೀಚಿಕೆಯಾಗಿದೆ. ಅದು ಯಾರಿಗೂ ಸಿಗುತ್ತಿಲ್ಲ. ಹಣ ಎಲ್ಲಿಗೆ ಹೋಗಿದೆ. ಇದು ಸಕಾಲಕ್ಕೆ ಜನರಿಗೆ ಯಾಕೆ ಸಿಗುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಜನರ ಮುಂದೆ ನಗೆಪಾಟಲಿಗೆ ಈಡಾಗಿದ್ದಾರೆ. ಕೊಟ್ಟ ಆಶ್ವಾಸನೆ ವಿಚಾರದಲ್ಲಿ ಜನರಿಗೆ ಮೋಸ ವಂಚನೆ ಮಾಡಿದ್ದೀರಿ. ಆ ಕಾರಣದಿಂದ ಗ್ಯಾರಂಟಿ ಅನುಷ್ಠಾನ ಆಗುತ್ತಿಲ್ಲ. ಅಕ್ಕಿ ಖರೀದಿಸಿದರೆ ಅದನ್ನು ಜನರಿಗೆ ಕೊಡಬೇಕು. ತೆಗೆದುಕೊಳ್ಳದೇ ಇದ್ದಲ್ಲಿ ಜನರಿಗೆ ಏನಾದರೂ ಸಬೂಬು ಹೇಳಬಹುದೆಂಬ ಚಿಂತನೆ ಸರ್ಕಾರದ್ದು ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

17 mins ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

3 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

6 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

9 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

9 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

9 hours ago