ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್ನಲ್ಲಿ ಮೀಸಲಿಟ್ಟ 52,009 ಕೋಟಿ ರೂ ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಗದಿತ ಸಮಯಕ್ಕೆ ಗ್ಯಾರಂಟಿಗಳು ತಲುಪುತ್ತಿಲ್ಲ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಒಳಗಡೆ ಗ್ಯಾರಂಟಿ ಕೊಡಬೇಕೇ ಬೇಡವೇ ಎಂಬ ವಿಚಾರ ಚರ್ಚೆಯಲ್ಲಿದೆ. ಈ ಕಾರಣದಿಂದ ಜನರಿಗೆ ಅನುಮಾನ ಬರುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ದಲಿತ ಹಣ 25 ಸಾವಿರ ಕೋಟಿಯನ್ನೂ ನುಂಗಿದ್ದೀರಿ. 52 ಸಾವಿರ ಕೋಟಿಯನ್ನು ಬಜೆಟ್ನಲ್ಲಿ ಇಟ್ಟಿದ್ದೀರಿ. 6 ತಿಂಗಳಿನಿಂದ ಅಕ್ಕಿ ಕೊಡುವುದಕ್ಕೂ ತಿಲಾಂಜಲಿ ಹಾಡಿದ್ದಾರೆ. ಮನೆ ಒಡತಿಗೆ ಕೊಡುತ್ತಿದ್ದ 2 ಸಾವಿರ ರೂ ಬರುತ್ತಿಲ್ಲ. ಯುವನಿಧಿ ಮರೀಚಿಕೆಯಾಗಿದೆ. ಅದು ಯಾರಿಗೂ ಸಿಗುತ್ತಿಲ್ಲ. ಹಣ ಎಲ್ಲಿಗೆ ಹೋಗಿದೆ. ಇದು ಸಕಾಲಕ್ಕೆ ಜನರಿಗೆ ಯಾಕೆ ಸಿಗುತ್ತಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಜನರ ಮುಂದೆ ನಗೆಪಾಟಲಿಗೆ ಈಡಾಗಿದ್ದಾರೆ. ಕೊಟ್ಟ ಆಶ್ವಾಸನೆ ವಿಚಾರದಲ್ಲಿ ಜನರಿಗೆ ಮೋಸ ವಂಚನೆ ಮಾಡಿದ್ದೀರಿ. ಆ ಕಾರಣದಿಂದ ಗ್ಯಾರಂಟಿ ಅನುಷ್ಠಾನ ಆಗುತ್ತಿಲ್ಲ. ಅಕ್ಕಿ ಖರೀದಿಸಿದರೆ ಅದನ್ನು ಜನರಿಗೆ ಕೊಡಬೇಕು. ತೆಗೆದುಕೊಳ್ಳದೇ ಇದ್ದಲ್ಲಿ ಜನರಿಗೆ ಏನಾದರೂ ಸಬೂಬು ಹೇಳಬಹುದೆಂಬ ಚಿಂತನೆ ಸರ್ಕಾರದ್ದು ಎಂದು ಕಿಡಿಕಾರಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…