ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್ನಲ್ಲಿ ಮೀಸಲಿಟ್ಟ 52,009 ಕೋಟಿ ರೂ ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಗದಿತ ಸಮಯಕ್ಕೆ ಗ್ಯಾರಂಟಿಗಳು ತಲುಪುತ್ತಿಲ್ಲ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಒಳಗಡೆ ಗ್ಯಾರಂಟಿ ಕೊಡಬೇಕೇ ಬೇಡವೇ ಎಂಬ ವಿಚಾರ ಚರ್ಚೆಯಲ್ಲಿದೆ. ಈ ಕಾರಣದಿಂದ ಜನರಿಗೆ ಅನುಮಾನ ಬರುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ದಲಿತ ಹಣ 25 ಸಾವಿರ ಕೋಟಿಯನ್ನೂ ನುಂಗಿದ್ದೀರಿ. 52 ಸಾವಿರ ಕೋಟಿಯನ್ನು ಬಜೆಟ್ನಲ್ಲಿ ಇಟ್ಟಿದ್ದೀರಿ. 6 ತಿಂಗಳಿನಿಂದ ಅಕ್ಕಿ ಕೊಡುವುದಕ್ಕೂ ತಿಲಾಂಜಲಿ ಹಾಡಿದ್ದಾರೆ. ಮನೆ ಒಡತಿಗೆ ಕೊಡುತ್ತಿದ್ದ 2 ಸಾವಿರ ರೂ ಬರುತ್ತಿಲ್ಲ. ಯುವನಿಧಿ ಮರೀಚಿಕೆಯಾಗಿದೆ. ಅದು ಯಾರಿಗೂ ಸಿಗುತ್ತಿಲ್ಲ. ಹಣ ಎಲ್ಲಿಗೆ ಹೋಗಿದೆ. ಇದು ಸಕಾಲಕ್ಕೆ ಜನರಿಗೆ ಯಾಕೆ ಸಿಗುತ್ತಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಜನರ ಮುಂದೆ ನಗೆಪಾಟಲಿಗೆ ಈಡಾಗಿದ್ದಾರೆ. ಕೊಟ್ಟ ಆಶ್ವಾಸನೆ ವಿಚಾರದಲ್ಲಿ ಜನರಿಗೆ ಮೋಸ ವಂಚನೆ ಮಾಡಿದ್ದೀರಿ. ಆ ಕಾರಣದಿಂದ ಗ್ಯಾರಂಟಿ ಅನುಷ್ಠಾನ ಆಗುತ್ತಿಲ್ಲ. ಅಕ್ಕಿ ಖರೀದಿಸಿದರೆ ಅದನ್ನು ಜನರಿಗೆ ಕೊಡಬೇಕು. ತೆಗೆದುಕೊಳ್ಳದೇ ಇದ್ದಲ್ಲಿ ಜನರಿಗೆ ಏನಾದರೂ ಸಬೂಬು ಹೇಳಬಹುದೆಂಬ ಚಿಂತನೆ ಸರ್ಕಾರದ್ದು ಎಂದು ಕಿಡಿಕಾರಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…