ರಾಜ್ಯ

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರ: ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ದೇಶಕ್ಕೆ ಗಂಡಾಂತರವಿಲ್ಲ. ಆದರೆ ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂವಿಧಾನದ ಪ್ರಕಾರ ಧಾರ್ಮಿಕ ಮೀಸಲಾತಿ ಕೊಡಲು ಅವಕಾಶವಿಲ್ಲ. ಕಾಂಗ್ರೆಸ್‌ನವರು ಗುತ್ತಿಗೆಯಲ್ಲೂ ಮೀಸಲಾತಿ ಕೊಟ್ಟಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡೇ ಮಾಡುತ್ತೇವೆ. ಸರ್ಕಾರ ಒಂದು ಸಮುದಾಯವನ್ನು ಓಲೈಸುವ ಕೆಲಸ ಮಾಡುತ್ತಿದೆ. ಇದು ದೇಶಕ್ಕೆ ಗಂಡಾಂತರ ತರುವ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಒಳಮೀಸಲಾತಿಯನ್ನು ಪರಿಶಿಷ್ಟ ವರ್ಗಕ್ಕೆ ಕೊಡಲೇಬೇಕು. ತೆಲಂಗಾಣದಲ್ಲಿ ಈಗಾಗಲೇ ಘೋಷಣೆ ಆಗಿದೆ. ಆದರೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಈ ಬಗ್ಗೆ ಬೇಗ ಸರ್ಕಾರ ತೀರ್ಮಾನ ಕೈಗೊಳ್ಳಲಿ ಎಂದು ಆಗ್ರಹಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾಹಿತಿ ಇದ್ರೆ ಸರ್ಕಾರಕ್ಕೆ ನೀಡಲಿ: ಯತ್ನಾಳ್‌ಗೆ ಸಚಿವ ರಾಮಲಿಂಗರೆಡ್ಡಿ ಟಾಂಗ್‌

ಬೆಂಗಳೂರು: ನಟಿ ರನ್ಯಾಗೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಚಿವರ ಸಹಕಾರವಿದೆ ಎಂಬ ಯತ್ನಾಳ್‌ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ…

32 seconds ago

ನುಗ್ಗೆಯಿಂದ ಆದಾಯ ನಿರಂತರ

ರಮೇಶ್ ಪಿ. ರಂಗಸಮುದ್ರ ಕೃಷಿಯಲ್ಲಿ ಖರ್ಚು ಹೆಚ್ಚಾಗಿದ್ದು, ಆದಾಯ ಕಡಿಮೆಯಾಗಿದೆ. ಜತೆಗೆ ಕೃಷಿ ಕಾರ್ಮಿಕರ ಕೊರತೆ, ಹವಾಮಾನ ವೈಪರೀತ್ಯ, ಮಾರುಕಟ್ಟೆ…

2 hours ago

ನಂಜಪ್ಪನವರ ಎರೆಹುಳು ಕಾಯಕ

ಸುತ್ತೂರು ನಂಜುಂಡ ನಾಯಕ ಮಣ್ಣಿನ ಆರೋಗ್ಯ ಹಾಗೂ ರೈತ ಮಿತ್ರ ಎರೆಹುಳುವನ್ನು ಕಾಪಾಡಲು ಕಸದಿಂದ ಗೊಬ್ಬರ ತಯಾರಿಸಿ, ಆ ಮೂಲಕ…

2 hours ago

ಗ್ಯಾರಂಟಿ ಬಲೆಯಿಂದ ಬಚಾವಾಗುವುದು ಹೇಗೆ?

ಕೆಲವೇ ಕಾಲದ ಅಂತರದಲ್ಲಿ ಕರ್ನಾಟಕ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಕೇಳಿ ಬರುತ್ತಿದೆ. ಅಂದ…

2 hours ago

ಬೃಹತ್‌ ಮೈಸೂರು ಮಹಾನಗರ ಪಾಲಿಕೆಯ ಮುಂಗಾಣ್ಕೆ ಜನರಿಗೆ ಗೊತ್ತಾಗಬೇಕು

ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ವಿಭಜಿಸುವ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ, ಅದೇ…

3 hours ago

6 ತಿಂಗಳೊಳಗೆ ಹಾಡಿಗಳಿಗೆ ವಿದ್ಯುದ್ದೀಕರಣ ಭಾಗ್ಯ!

ಕೇಂದ್ರ ಸರ್ಕಾರದಿಂದ ೫೫. ೧೪ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನ ಕೆ. ಬಿ. ರಮೇಶನಾಯಕ ಮೈಸೂರು: ಸ್ವಾತಂತ್ರ್ಯ ಬಂದು…

3 hours ago