ರಾಜ್ಯ

ರನ್ಯಾರಾವ್‌ ಕೇಸ್‌ನಲ್ಲಿ ಸಚಿವರ ಕೈವಾಡ ಆರೋಪ: ಬಿಜೆಪಿಗೆ ಟಾಂಗ್‌ ನೀಡಿದ ಚಲುವರಾಯಸ್ವಾಮಿ

ಬೆಂಗಳೂರು: ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರಿಬ್ಬ ಕೈವಾಡವಿದೆ ಎಂಬ ಆರೋಪದ ಸಂಬಂಧ ಬಿಜೆಪಿಯ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್‌ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವಾಗ ಜನರಿಗೆ ಉಪಯೋಗವಾಗುವಂತಹ ಕೆಲಸ ಮಾಡಿದ್ದಾರೆ. ಅವರು ಇಲ್ಲಿಯವರೆಗೂ ರಾಜ್ಯ ಸರ್ಕಾರಕ್ಕೆ ಒಂದೇ ಒಂದು ಸಲಹೆ ನೀಡಿಲ್ಲ. ಯಾವಾಗಲೂ ಟೀಕೆ-ಟಿಪ್ಪಣಿಯನ್ನೇ ಮಾಡುತ್ತಾರೆ. ಈ ಹಿಂದೆ ಯಾವ್ಯಾವ ವಿಚಾರಗಳನ್ನು ಹೇಳಿದ್ದರೂ ಅವೆಲ್ಲವೂ ಹುಸಿಯಾಗಿದೆ. ರನ್ಯಾರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಆರೋಪ ಸಂಬಂಧ ಮೊದಲು ಸಿಬಿಐ ತನಿಖೆ ನಡೆಸಲಿ, ಬಳಿಕ ಸತ್ಯಾ ಗೊತ್ತಾಗಲಿದೆ. ಹೀಗಾಗಿ ವಿರೋಧ ಪಕ್ಷದವರಿಗೆ ಸ್ಪಷ್ಟತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿ ಶಾಸಕ ಭರತ್‌ ಶೆಟ್ಟಿ ಹೇಳಿಕೆ ಏನು?

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನವಾದ ಬೆನ್ನಲ್ಲೇ ಸಚಿವರಿಬ್ಬರಿಗೆ ಕರೆ ಮಾಡಿದ್ದಾರೆ ಎಂಬ ವಿಚಾರ ಹೊರ ಬಿದ್ದಿರುವ ವಿಚಾರ ಗೊತ್ತಾಗಿದೆ. ಅಲ್ಲದೇ ಮೂವರು ಸಚಿವರ ಸಂಪರ್ಕದ ಬಗ್ಗೆಯೂ ಮಾತನಾಡುತ್ತಿದ್ದಾರೆ. ಸಿಬಿಐ ತನಿಖೆ ನಡೆಯುತ್ತಿದೆ, ಅದರಿಂದ ಸತ್ಯಾಂಶ ಹೊರ ಬರಲಿದೆ ಎಂದು ಹೇಳಿದ್ದರು.

ಅರ್ಚನ ಎಸ್‌ ಎಸ್

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

4 mins ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

11 mins ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

17 mins ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

23 mins ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

8 hours ago