ಬೆಂಗಳೂರು: ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಸಚಿವರಿಬ್ಬ ಕೈವಾಡವಿದೆ ಎಂಬ ಆರೋಪದ ಸಂಬಂಧ ಬಿಜೆಪಿಯ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವಾಗ ಜನರಿಗೆ ಉಪಯೋಗವಾಗುವಂತಹ ಕೆಲಸ ಮಾಡಿದ್ದಾರೆ. ಅವರು ಇಲ್ಲಿಯವರೆಗೂ ರಾಜ್ಯ ಸರ್ಕಾರಕ್ಕೆ ಒಂದೇ ಒಂದು ಸಲಹೆ ನೀಡಿಲ್ಲ. ಯಾವಾಗಲೂ ಟೀಕೆ-ಟಿಪ್ಪಣಿಯನ್ನೇ ಮಾಡುತ್ತಾರೆ. ಈ ಹಿಂದೆ ಯಾವ್ಯಾವ ವಿಚಾರಗಳನ್ನು ಹೇಳಿದ್ದರೂ ಅವೆಲ್ಲವೂ ಹುಸಿಯಾಗಿದೆ. ರನ್ಯಾರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಆರೋಪ ಸಂಬಂಧ ಮೊದಲು ಸಿಬಿಐ ತನಿಖೆ ನಡೆಸಲಿ, ಬಳಿಕ ಸತ್ಯಾ ಗೊತ್ತಾಗಲಿದೆ. ಹೀಗಾಗಿ ವಿರೋಧ ಪಕ್ಷದವರಿಗೆ ಸ್ಪಷ್ಟತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿ ಶಾಸಕ ಭರತ್ ಶೆಟ್ಟಿ ಹೇಳಿಕೆ ಏನು?
ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಬಂಧನವಾದ ಬೆನ್ನಲ್ಲೇ ಸಚಿವರಿಬ್ಬರಿಗೆ ಕರೆ ಮಾಡಿದ್ದಾರೆ ಎಂಬ ವಿಚಾರ ಹೊರ ಬಿದ್ದಿರುವ ವಿಚಾರ ಗೊತ್ತಾಗಿದೆ. ಅಲ್ಲದೇ ಮೂವರು ಸಚಿವರ ಸಂಪರ್ಕದ ಬಗ್ಗೆಯೂ ಮಾತನಾಡುತ್ತಿದ್ದಾರೆ. ಸಿಬಿಐ ತನಿಖೆ ನಡೆಯುತ್ತಿದೆ, ಅದರಿಂದ ಸತ್ಯಾಂಶ ಹೊರ ಬರಲಿದೆ ಎಂದು ಹೇಳಿದ್ದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…