ರಾಜ್ಯ

ಚಾಮುಂಡಿ ಪ್ರಾಧಿಕಾರದ ಸಭೆ ನ್ಯಾಯಾಂಗ ನಿಂದನೆಯಲ್ಲ: ಎಚ್.ಕೆ ಪಾಟೀಲ

ಬೆಂಗಳೂರು: ಚಾಮುಂಡಿ ಪ್ರಾಧಿಕಾರದ ಸಭೆ ನಡೆಸಿರುವುದು ನ್ಯಾಯಾಂಗ ನಿಂದನೆಯಲ್ಲ. ಸಭೆ ನಡೆದ ಸಂದರ್ಭದಲ್ಲಿ ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಮಾಧ್ಯಮ ಪ್ರತಿನಿಧಿಗಳಿಗೆ ಇಂದಿಲ್ಲಿ ತಿಳಿಸಿದರು.

ಸಚಿವ ಸಂಪುಟದ ನಿರ್ಣಯಗಳನ್ನು ವಿವರಿಸಿದ ಸಚಿವರು  ಪ್ರಮೋದಾ ದೇವಿ ಒಡೆಯರ್ ರವರು ತಡೆಯಾಜ್ಞೆ ಇದ್ದರೂ ಪ್ರಾಧಿಕಾರದ ಸಭೆ ನಡೆಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿರುವ ಆರೋಪ ಸರಿಯಲ್ಲ. ಇಂದು ಈ ರಿಟ್ ಅರ್ಜಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ಸಭೆ ನಡೆದ ದಿನಾಂಕದಂದು ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆಂದು ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್  ಎನ್. ದೇವದಾಸ ರವರು ಪತ್ರ ಮುಖೇನ ತಿಳಿಸಿರುವುದನ್ನು ತಾವು ಸಚಿವ ಸಂಪುಟದ ಸಭೆಯ ಗಮನಕ್ಕೆ ತಂದಿರುವುದಾಗಿ ಸಚಿವರು ವಿವರಿಸಿದರು.

ಚಾಮುಂಡಿ ಪ್ರಾಧಿಕಾರದ ಕಾನೂನು ಅಸ್ತಿತ್ವದಲ್ಲಿದ್ದು, ಈ ಕಾನೂನಿನ ಕಲಂಗಳನ್ನು ಜಾರಿಗೆ ತರಲು ಅಥವಾ ಅನುಷ್ಠಾನಗೊಳಿಸಲು ಯಾವುದೇ ನ್ಯಾಯಾಂಗದ ಅಡ್ಡಿಗಳಿಲ್ಲವೆಂದು ಅಡ್ವೋಕೇಟ್ ಜನರಲ್ ಕಛೇರಿಯಿಂದ ತಮಗೆ ಪತ್ರ ಕಳುಹಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

9 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

9 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

9 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

9 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago