ಬೆಂಗಳೂರು: ಚಾಮುಂಡಿ ಪ್ರಾಧಿಕಾರದ ಸಭೆ ನಡೆಸಿರುವುದು ನ್ಯಾಯಾಂಗ ನಿಂದನೆಯಲ್ಲ. ಸಭೆ ನಡೆದ ಸಂದರ್ಭದಲ್ಲಿ ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಮಾಧ್ಯಮ ಪ್ರತಿನಿಧಿಗಳಿಗೆ ಇಂದಿಲ್ಲಿ ತಿಳಿಸಿದರು.
ಸಚಿವ ಸಂಪುಟದ ನಿರ್ಣಯಗಳನ್ನು ವಿವರಿಸಿದ ಸಚಿವರು ಪ್ರಮೋದಾ ದೇವಿ ಒಡೆಯರ್ ರವರು ತಡೆಯಾಜ್ಞೆ ಇದ್ದರೂ ಪ್ರಾಧಿಕಾರದ ಸಭೆ ನಡೆಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿರುವ ಆರೋಪ ಸರಿಯಲ್ಲ. ಇಂದು ಈ ರಿಟ್ ಅರ್ಜಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ಸಭೆ ನಡೆದ ದಿನಾಂಕದಂದು ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆಂದು ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್. ದೇವದಾಸ ರವರು ಪತ್ರ ಮುಖೇನ ತಿಳಿಸಿರುವುದನ್ನು ತಾವು ಸಚಿವ ಸಂಪುಟದ ಸಭೆಯ ಗಮನಕ್ಕೆ ತಂದಿರುವುದಾಗಿ ಸಚಿವರು ವಿವರಿಸಿದರು.
ಚಾಮುಂಡಿ ಪ್ರಾಧಿಕಾರದ ಕಾನೂನು ಅಸ್ತಿತ್ವದಲ್ಲಿದ್ದು, ಈ ಕಾನೂನಿನ ಕಲಂಗಳನ್ನು ಜಾರಿಗೆ ತರಲು ಅಥವಾ ಅನುಷ್ಠಾನಗೊಳಿಸಲು ಯಾವುದೇ ನ್ಯಾಯಾಂಗದ ಅಡ್ಡಿಗಳಿಲ್ಲವೆಂದು ಅಡ್ವೋಕೇಟ್ ಜನರಲ್ ಕಛೇರಿಯಿಂದ ತಮಗೆ ಪತ್ರ ಕಳುಹಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…