ಬೆಂಗಳೂರು: ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿಚಾರಕ್ಕೆ ಈಗಾಗಲೇ ಕ್ಷಮೆ ಯಾಚಿಸಿದ್ದೇನೆ. ನನಗೆ ಆರೋಗ್ಯ ಸರಿಯಲ್ಲ, ಅನಾರೋಗ್ಯವೆಂಬ ಕಾರಣಕ್ಕೆ ವಿಚಾರಣೆಗೆ ಹೋಗುತ್ತಿಲ್ಲ ಎಂದು ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದ್ದಾರೆ.
ಈ ಕುರಿತು ಇಂದು(ಡಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕೆಂಬ ವಿಚಾರವಾಗಿ ಪೊಲೀಸರು ಎಫ್ಐಆರ್ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆದರೆ ನಾನು ಅನಾರೋಗ್ಯದಿಂದ ಬಳಲುತ್ತಿದ್ದು, ನಡೆಯೋಕೂ ಆಗುತ್ತಿಲ್ಲ. ಹೀಗಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ, ಒಂದು ವೇಳೆ ಪೊಲೀಸರೇ ಮಠಕ್ಕೆ ಬಂದರೆ ಹೇಳಿಕೆಗಳನ್ನು ನೀಡುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎಚ್.ಡಿ.ಕುಮಾರಸ್ವಾಮಿ ಕರಿಯ ಎಂದವರ ಮೇಲೆ ಪ್ರಕರಣ ದಾಖಲಿಸಲಿಲ್ಲ, ಪಾಕ್ ಪರ ಘೋಷಣೆ ಕೂಗಿದವರ ಮೇಲೆ ಯಾವುದೇ ಕ್ರಮ ಕೈಗೊಳಲಿಲ್ಲ. ಆದರೆ ನಾನು ಕ್ಷಮೆಯಾಚಿಸಿದ್ದರೂ ನನ್ನ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಹಾಗಾಗಿ ಪೊಲೀಸರ ಮೇಲೆ ನನಗೆ ಅಸಮಾಧಾನವಿದೆ ಎಂದಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…