ರಾಜ್ಯ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಶಾಸಕರ ಅಭಿಪ್ರಾಯ ಕೇಳಿ: ಹೈಕಮಾಂಡ್‌ಗೆ ಸತೀಶ್‌ ಜಾರಕಿಹೊಳಿ ಆಗ್ರಹ

ಬೆಂಗಳೂರು: ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಪೂರ್ಣಾವಧಿಗೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲಿ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬಂದಿದ್ದು, ಕಳೆದ ಕೆಲ ದಿನಗಳಿಂದ ಈ ವಿಚಾರ ಭಾರೀ ಪ್ರಮಾಣದಲ್ಲಿ ಚರ್ಚೆಯಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿ.ಕೆ.ಶಿವಕುಮಾರ್‌ ಅವರನ್ನು ಕೆಳಗಿಳಿಸಿ ಆ ಸ್ಥಾನಕ್ಕೆ ಕಾಂಗ್ರೆಸ್‌ನ ಪ್ರಭಾವಿ ಶಾಸಕರೊಬ್ಬರನ್ನು ಕೂರಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ ಅವರು, ಮತ್ತೆ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ಹೈಕಮಾಂಡ್‌ಗೆ ಬೇಡಿಕೆಯಿಟ್ಟಿದ್ದಾರೆ.

ರಾಜ್ಯದಲ್ಲಿ ಪಕ್ಷ ಸಂಘಟನೆ ಕೆಲಸ ಕಡಿಮೆಯಾಗಿದೆ. ಎಲ್ಲಾ ಕಾರ್ಯಾಧ್ಯಕ್ಷರು ಮಂತ್ರಿಗಳಾಗಿದ್ದೇವೆ. ಕಾರ್ಯಾಧ್ಯಕ್ಷರು ಮೊದಲಿನಂತೆ ಕೆಲಸ ಮಾಡುತ್ತಿಲ್ಲ. ಅಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ನೇಮಿಸುವ ಅವಶ್ಯಕತೆಯಿದೆ. ನನ್ನ ಪರ ಸಾಕಷ್ಟು ಜನರು ಧ್ವನಿ ಎತ್ತಿದ್ದಾರೆ. ಡಿಕೆಶಿ ಅವರನ್ನು ಮುಂದುವರಿಸುತ್ತಾರೋ ಅಥವಾ ಬೇರೆಯವರನ್ನು ನೇಮಿಸುತ್ತಾರೋ ಗೊತ್ತಿಲ್ಲ. ಈ ಬಗ್ಗೆ ಹೈಕಮಾಂಡ್‌ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಶಾಸಕರೆಲ್ಲರ ಅಭಿಪ್ರಾಯ ಕೇಳಿ. ಅಧ್ಯಕ್ಷರ ಕುರಿತು ಅಭಿಪ್ರಾಯ ಸಂಗ್ರಹಿಸಬೇಕು. ಎಲ್ಲಾ ಕಾಂಗ್ರೆಸ್‌ ಶಾಸಕರ ಅಭಿಪ್ರಾಯ ಆಲಿಸಿ ತೀರ್ಮಾನಿಸಬೇಕು. ಶಾಸಕರು ಅಭಿಪ್ರಾಯದಂತೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲಿ. ಶೀಘ್ರದಲ್ಲೇ ಈ ಬಗ್ಗೆ ಕಾಂಗ್ರೆಸ್‌ ನಿರ್ಧಾರ ಮಾಡಲಿ ಎಂದು ಆಗ್ರಹಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

16 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

16 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago