ರಾಜ್ಯ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಶಾಸಕರ ಅಭಿಪ್ರಾಯ ಕೇಳಿ: ಹೈಕಮಾಂಡ್‌ಗೆ ಸತೀಶ್‌ ಜಾರಕಿಹೊಳಿ ಆಗ್ರಹ

ಬೆಂಗಳೂರು: ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಪೂರ್ಣಾವಧಿಗೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲಿ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬಂದಿದ್ದು, ಕಳೆದ ಕೆಲ ದಿನಗಳಿಂದ ಈ ವಿಚಾರ ಭಾರೀ ಪ್ರಮಾಣದಲ್ಲಿ ಚರ್ಚೆಯಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿ.ಕೆ.ಶಿವಕುಮಾರ್‌ ಅವರನ್ನು ಕೆಳಗಿಳಿಸಿ ಆ ಸ್ಥಾನಕ್ಕೆ ಕಾಂಗ್ರೆಸ್‌ನ ಪ್ರಭಾವಿ ಶಾಸಕರೊಬ್ಬರನ್ನು ಕೂರಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ ಅವರು, ಮತ್ತೆ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ಹೈಕಮಾಂಡ್‌ಗೆ ಬೇಡಿಕೆಯಿಟ್ಟಿದ್ದಾರೆ.

ರಾಜ್ಯದಲ್ಲಿ ಪಕ್ಷ ಸಂಘಟನೆ ಕೆಲಸ ಕಡಿಮೆಯಾಗಿದೆ. ಎಲ್ಲಾ ಕಾರ್ಯಾಧ್ಯಕ್ಷರು ಮಂತ್ರಿಗಳಾಗಿದ್ದೇವೆ. ಕಾರ್ಯಾಧ್ಯಕ್ಷರು ಮೊದಲಿನಂತೆ ಕೆಲಸ ಮಾಡುತ್ತಿಲ್ಲ. ಅಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ನೇಮಿಸುವ ಅವಶ್ಯಕತೆಯಿದೆ. ನನ್ನ ಪರ ಸಾಕಷ್ಟು ಜನರು ಧ್ವನಿ ಎತ್ತಿದ್ದಾರೆ. ಡಿಕೆಶಿ ಅವರನ್ನು ಮುಂದುವರಿಸುತ್ತಾರೋ ಅಥವಾ ಬೇರೆಯವರನ್ನು ನೇಮಿಸುತ್ತಾರೋ ಗೊತ್ತಿಲ್ಲ. ಈ ಬಗ್ಗೆ ಹೈಕಮಾಂಡ್‌ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಶಾಸಕರೆಲ್ಲರ ಅಭಿಪ್ರಾಯ ಕೇಳಿ. ಅಧ್ಯಕ್ಷರ ಕುರಿತು ಅಭಿಪ್ರಾಯ ಸಂಗ್ರಹಿಸಬೇಕು. ಎಲ್ಲಾ ಕಾಂಗ್ರೆಸ್‌ ಶಾಸಕರ ಅಭಿಪ್ರಾಯ ಆಲಿಸಿ ತೀರ್ಮಾನಿಸಬೇಕು. ಶಾಸಕರು ಅಭಿಪ್ರಾಯದಂತೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲಿ. ಶೀಘ್ರದಲ್ಲೇ ಈ ಬಗ್ಗೆ ಕಾಂಗ್ರೆಸ್‌ ನಿರ್ಧಾರ ಮಾಡಲಿ ಎಂದು ಆಗ್ರಹಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

7 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

10 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

11 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

12 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

12 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

12 hours ago