ರಾಮನಗರ: ಚನ್ನಪಟ್ಟಣ ಉಪ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ನಿಖಿಲ್ ನಾಮಪತ್ರದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ.
ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ ನಿಖಿಲ್, ನಾಮಪತ್ರದಲ್ಲಿ 113 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯರಾಗಿರುವುದಾಗಿ ತಿಳಿಸಿದ್ದಾರೆ.
ಒಟ್ಟು 78.15 ಕೋಟಿ ರೂ.ಮೌಲ್ಯದ ಚರಾಸ್ತಿ, 29.34 ಕೋಟಿ ರೂ. ಸ್ಥಿರಾಸ್ತಿಯನ್ನು ಹೊಂದಿದ್ದು, 1.488 ಕೆ.ಜಿ.ಚಿನ್ನ, 16 ಕೆ.ಜಿ. ಬೆಳ್ಳಿಯನ್ನು ಹೊಂದಿದ್ದಾರೆ. ಅಲ್ಲದೇ 70.44 ಕೋಟಿ ರೂ. ಸಾಲ ಇರುವುದಾಗಿ ನಮೂದಿಸಿದ್ದಾರೆ.
ಪತ್ನಿ ರೇವತಿ ಹೆಸರಲ್ಲಿ 5.49 ಕೋಟಿ ರೂ. ಮೌಲ್ಯದ ಚರಾಸ್ತಿ, 43 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಜೊತೆಗೆ 1.411 ಕೆಜಿ ಚಿನ್ನ, 33.05 ಕೆಜಿ ಬೆಳ್ಳಿ ಹಾಗೂ 13 ಕ್ಯಾರೆಟ್ ವಜ್ರವಿದ್ದು, 4.96 ಕೋಟಿ ರೂ. ಸಾಲ ಇರುವುದಾಗಿ ಹೇಳಿದ್ದಾರೆ.
ಇನ್ನೂ ಪುತ್ರ ಆವ್ಯಾನ್ ದೇವ್ ಹೆಸರಿನಲ್ಲಿ 11 ಲಕ್ಷ ಹಣವಿದೆ. ಅಲ್ಲದೇ, 1 ಇನ್ನೋವಾ ಕ್ರಿಸ್ಟ ಕಾರು, 1 ಇನ್ನೋವಾ ಐ ಕ್ರಾಸ್, 1 ರೆಂಜ್ ರೋವರ್ ಹಾಗೂ ಎರಡೂ ಕ್ಯಾರಾವ್ಯಾನ್ ಇದೆ ಎಂದು ನಿಖಿಲ್ ಕುಮಾರಸ್ವಾಮಿ ತಮ್ಮ ಆಸ್ತಿವಿವರವನ್ನು ಬಹಿರಂಗಪಡಿಸಿದ್ದಾರೆ.
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…
ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ…
ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…