ರಾಜ್ಯ

ಚನ್ನಪಟ್ಟಣ: ಮೈತ್ರಿ ಅಭ್ಯರ್ಥಿ ನಿಖಿಲ್‌ ಆಸ್ತಿ ಬಹಿರಂಗ

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ನಿಖಿಲ್‌ ನಾಮಪತ್ರದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ.

ಬೃಹತ್‌ ರೋಡ್‌ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ ನಿಖಿಲ್‌, ನಾಮಪತ್ರದಲ್ಲಿ 113 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯರಾಗಿರುವುದಾಗಿ ತಿಳಿಸಿದ್ದಾರೆ.

ಒಟ್ಟು 78.15 ಕೋಟಿ ರೂ.ಮೌಲ್ಯದ ಚರಾಸ್ತಿ, 29.34 ಕೋಟಿ ರೂ. ಸ್ಥಿರಾಸ್ತಿಯನ್ನು ಹೊಂದಿದ್ದು, 1.488 ಕೆ.ಜಿ.ಚಿನ್ನ, 16 ಕೆ.ಜಿ. ಬೆಳ್ಳಿಯನ್ನು ಹೊಂದಿದ್ದಾರೆ. ಅಲ್ಲದೇ 70.44 ಕೋಟಿ ರೂ. ಸಾಲ ಇರುವುದಾಗಿ ನಮೂದಿಸಿದ್ದಾರೆ.

ಪತ್ನಿ ರೇವತಿ ಹೆಸರಲ್ಲಿ 5.49 ಕೋಟಿ ರೂ. ಮೌಲ್ಯದ ಚರಾಸ್ತಿ, 43 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಜೊತೆಗೆ 1.411 ಕೆಜಿ ಚಿನ್ನ, 33.05 ಕೆಜಿ ಬೆಳ್ಳಿ ಹಾಗೂ 13 ಕ್ಯಾರೆಟ್‌ ವಜ್ರವಿದ್ದು, 4.96 ಕೋಟಿ ರೂ. ಸಾಲ ಇರುವುದಾಗಿ ಹೇಳಿದ್ದಾರೆ.

ಇನ್ನೂ ಪುತ್ರ ಆವ್ಯಾನ್‌ ದೇವ್‌ ಹೆಸರಿನಲ್ಲಿ 11 ಲಕ್ಷ ಹಣವಿದೆ. ಅಲ್ಲದೇ, 1 ಇನ್ನೋವಾ ಕ್ರಿಸ್ಟ ಕಾರು, 1 ಇನ್ನೋವಾ ಐ ಕ್ರಾಸ್‌, 1 ರೆಂಜ್‌ ರೋವರ್‌ ಹಾಗೂ ಎರಡೂ ಕ್ಯಾರಾವ್ಯಾನ್‌ ಇದೆ ಎಂದು ನಿಖಿಲ್‌ ಕುಮಾರಸ್ವಾಮಿ ತಮ್ಮ ಆಸ್ತಿವಿವರವನ್ನು ಬಹಿರಂಗಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

11 mins ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

3 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

4 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

7 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

7 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

13 hours ago