ರಾಜ್ಯ

ಚನ್ನಪಟ್ಟಣ ಉಪಚುನಾವಣೆಗೆ ಅಚ್ಚರಿ ಅಭ್ಯರ್ಥಿ: ಡಾ.ಮಂಜುನಾಥ್‌ ಪತ್ನಿ ಅನುಸೂಯ ಕಣಕ್ಕಿಳಿಸಲು ಪ್ಲಾನ್.?

ರಾಮನಗರ: ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಹೋರಾಟದ ನಡುವೆ ಉಪಚುನಾವಣೆ ಅಖಾಡಕ್ಕೆ ಒಕ್ಕಲಿಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಯೋಚಿಸಲಾಗುತ್ತಿದೆ.

ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜೊತೆಗೆ, ವದಂತಿಗಳ ಕೇಂದ್ರ ಬಿಂದುವೂ ಆಗಿದೆ. ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಯೋಚಿಸಲಾಗುತ್ತಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯಾಗಿದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿಕೆಶಿ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ.ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿವೆ ಎನ್ನಲಾಗುತ್ತಿದೆ.

ಈಗಾಗಲೇ ಬೆಂಗಳೂರು ಗ್ರಾಮಾಂತರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್‌ ಅವರನ್ನು ಸೋಲಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್‌ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಒಂದು ವೇಳೆ ಡಿಕೆಶಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಿದರೆ ಅವರನ್ನು ಕೂಡ ಕಟ್ಟಿಹಾಕುವ ನಿಟ್ಟಿನಲ್ಲಿ ಹಾಗೂ ಕಾಂಗ್ರೆಸ್‌ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ.ಸಿ.ಎನ್.ಮಂಜುನಾಥ್‌ ಪತ್ನಿಯನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿವೆ.

ಅನುಸೂಯ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಒಂದು ವೇಳೆ ಅನುಸೂಯ ಅವರನ್ನು ಕಣಕ್ಕಿಳಿಸಿದರೆ ಯಾವೆಲ್ಲಾ ಪ್ರಯೋಜನಗಳು ಆಗಬಹುದು ಎಂಬ ಬಗ್ಗೆ ಹಾಗೂ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ನಾಯಕರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

4 seconds ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

6 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

10 mins ago

ಕೆಸರುಗದ್ದೆ ಕ್ರೀಡಾಕೂಟಕೂಟ: ಕಾಡುತ್ತಿರುವ ಮಳೆ ಕೊರತೆ!

ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು…

15 mins ago

ಟಿಎಪಿಸಿಎಂಎಸ್ ಅಧಿಕಾರ ಹಿಡಿಯಲು ತಂತ್ರ-ಪ್ರತಿತಂತ್ರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…

19 mins ago