ಚನ್ನಪಟ್ಟಣ: ತಾಲೂಕಿನ ಗರಕಹಳ್ಳಿಯಲ್ಲಿ ಗೌರಿ-ಗಣೇಶ ಹಬ್ಬದ ಅಂಗವಾಗಿ ಪ್ರತಿಪ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಕೆರೆಯಲ್ಲಿ ವಿಸರ್ಜನೆ ಮಾಡುವಾಗ ವ್ಯಕ್ತಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜರುಗಿದೆ.
ಗ್ರಾಮದ ಪಾಪಣ್ಣ(60) ಎಂಬುವವರು ಮೃತಪಟ್ಟವರು. ಗ್ರಾಮದಲ್ಲಿ ಗಣೇಶ ಪ್ರತಿಷ್ಠಾಪಿಸಿ ರಾತ್ರಿಯೇ ಕೆರೆಯಲ್ಲಿ ವಿಸರ್ಜಿಸಲು ತೀರ್ಮಾನಿಸಲಾಗಿತ್ತು. ಅದರಂತೆ, ಅಂದು ರಾತ್ರಿಯೇ ಮೆರವಣಿಗೆ ಮಾಡಿ, ಊರಾಚೆಗಿನ ಕೆರೆಗೆ ಮಧ್ಯರಾತ್ರಿ 2ಗಂಟೆ ಸುಮಾರಿಗೆ ವಿಸರ್ಜನೆಗೆ ತೆಗೆದುಕೊಂಡು ಹೋಗಿದ್ದರು. ಈ ಸಂದರ್ಭದಲ್ಲಿ ಪಾಪಣ್ಣ ಕೂಡ ಇದ್ದರು. ಈ ವೇಳೆ ಅವರು ಮದ್ಯಪಾನ ಕೂಡ ಮಾಡಿದ್ದರು ಎಂದು ಪೊಲೀಸರು ತಿಳಿಸಿದರು.
ಮೂರ್ತಿ ವಿಸರ್ಜನೆ ಬಳಿಕ ಎಲ್ಲರೂ ಮನೆಗೆ ಬಂದರು. ಆದರೆ, ಪಾಪಣ್ಣ ಬಂದಿರಲಿಲ್ಲ. ಈ ಬಗ್ಗೆ ಕುಟುಂಬದವರು ಅಕ್ಕಪಕ್ಕದರನ್ನು ವಿಚಾರಿಸಿದಾಗಲೂ ಎಲ್ಲೂ ಪತ್ತೆಯಾಗಿಲ್ಲ. ಕಡೆಗೆ ಕೆರೆಯ ಬಳಿ ಹೋಗಿ ನೋಡಿದಾಗ ಪಾಪಣ್ಣ ಅವರ ಟವೆಲ್ ಪತ್ತೆಯಾಗಿದೆ ಎಂದು ಹೇಳಿದರು.
ಇಂದು ಬೆಳಿಗ್ಗೆ ಅಗ್ನಿಶಾಮಕ ದಳದವರು ಕೆರೆಯಲ್ಲಿ ಹುಡುಕಾಟ ನಡೆಸಿ, ಶವ ಹೊರತೆಗೆದಿದ್ದಾರೆ. ನಂತರ ಶವವನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.
ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…