ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕೇಂದ್ರ ಸಚಿವರು ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ ಕುಮಾರಸ್ವಾಮಿ ಭಾನುವಾರ(ಜು.7) ನಗರದ ತಮ್ಮ ನಿವಾಸದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸೇರಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಒಮ್ಮತವಾಗಿ ಚುನಾವಣೆ ಎದುರಿಸುವ ಬಗ್ಗೆಯೂ ಸಹ ಚರ್ಚೆ ನಡೆಸಿದರು.
ಯಾರೇ ಅಭ್ಯರ್ಥಿಯಾದರೂ ಅವರು ಎನ್ಡಿಎ ಅಭ್ಯರ್ಥಿಯಾಗಿರುತ್ತಾರೆ. ಅಭ್ಯರ್ಥಿ ಯಾರು ಎನ್ನುವುದು ಮುಖ್ಯವಲ್ಲ. ಎಲ್ಲರೂ ಒಗ್ಗಟಾಗಿ ಕೆಲಸ ಮಾಡಬೇಕು. ಮೈತ್ರಿ ಅಭ್ಯರ್ಥಿ ಗೆಲ್ಲಬೇಕು ಎನ್ನವುದು ನಮ್ಮೆಲ್ಲರ ಗುರಿ ಆಗಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.
ಸಿ.ಪಿ ಯೋಗೇಶ್ವರ್ ಅವರನ್ನು ಮುಖಂಡರೆಲ್ಲ ಹೋಗಿ ಭೇಟಿ ಮಾಡಿ ಮುಕ್ತವಾಗಿ ಚರ್ಚಿಸಿ, ಎಲ್ಲಾ ಹಂತದಲ್ಲೂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಜೊತೆಗೆ ಅವರ ಮಾರ್ಗದರ್ಶನ ಪಡೆಯಬೇಕು ಎಂದು ಮುಖಂಡರಿಗೆ ಕುಮಾರಸ್ವಾಮಿ ಸೂಚಿಸಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…