ರಾಜ್ಯ

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ ಹೆಸರು ಅಂತಿಮ.?

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ವಿಧಾನಪರಿಷತ್‌ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್‌ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.

ಪಕ್ಷದ ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿದ್ದ ಯೋಗೇಶ್ವರ್‌ ಅವರು, ಕುಮಾರಸ್ವಾಮಿ ಅವರನ್ನು ಕಂಡು ಮಾತುಕತೆ ನಡೆಸಿದ್ದಾರೆ. ಈ ವೇಳೆ ಚನ್ನಪಟ್ಟಣದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಕುಮಾರಸ್ವಾಮಿ ಸಹ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಮೈತ್ರಿ ಪಕ್ಷಗಳ ಮೂಲಗಳ ಪ್ರಕಾರ ಯೋಗೇಶ್ವರ್‌ ಅವರಿಗೆ ಬಿಜೆಪಿ ಟಿಕೆಟ್‌ ಅಂತಿಮವಾಗುವ ಲಕ್ಷಣ ದಟ್ಟವಾಗಿದೆ.

ಜೆಡಿಎಸ್‌ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸತತ ಎರಡು ಸಲ ಚನ್ನಪಟ್ಟಣದಿಂದ ಜಯ ಸಾಧಿಸಿದ್ದು, ಅವರ ಒಲವು ಯಾರ ಪರ ಇದೆಯೋ ಅವರೇ ಸ್ಪರ್ಧಿಯಾಗುವುದು ಬಹುತೇಕ ಖಚಿತ. ಅಭ್ಯರ್ಥಿ ಆಯ್ಕೆಯನ್ನು ಬಿಜೆಪಿಯವರು ಸಹ ಕುಮಾರಸ್ವಾಮಿ ಅವರಿಗೆ ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಈಗಾಗಲೇ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದೆ. ಹಾಗಾಗಿ ಕುಮಾರಸ್ವಾಮಿ ಅವರಿಗೆ ಪಕ್ಷ ಪ್ರತಿಷ್ಠೆಗಿಂತ ಗೆಲುವೇ ಮುಖ್ಯವಾಗಿದೆ. ಸದ್ಯ ಕ್ಷೇತ್ರದಲ್ಲಿ ಯೋಗೇಶ್ವರ್‌ ಪರ ಹೆಚ್ಚಿನ ದನಿ ಮೊಳಗುತ್ತಿದೆ. ಬಿಜೆಪಿಯ ಜಿಲ್ಲಾಧ್ಯಕ್ಷರೇ ಸ್ವತಃ ಸುದ್ದಿಗೋಷ್ಠಿ ನಡೆಸಿ ಸಿಪಿವೈಗೆ ಟಿಕೆಟ್‌ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತೊಂದೆಡೆ ಜೆಡಿಎಸ್‌ನಿಂದ ನಿಖಿಲ್‌ ಕುಮಾರಸ್ವಾಮಿ ಹೆಸರು ಅಷ್ಟಾಗಿ ಕೇಳಿ ಬರುತ್ತಿಲ್ಲ. ಚುನಾವಣೆ ಗೆಲುವು ಎಚ್.ಡಿ.ಕುಮಾರಸ್ವಾಮಿಗೆ ಪ್ರತಿಷ್ಠೆಯಾಗಿರುವುದರಿಂದ ಸಿಪಿವೈ ಆಯ್ಕೆ ಅನಿವಾರ್ಯವಾಗಿದೆ ಎನ್ನಲಾಗುತ್ತಿದೆ.

ಸಚಿವ ಹಾಗೂ ಶಾಸಕನಾಗಿ ಯೋಗೇಶ್ವರ್‌ ಅವರಿಗೆ ಹೆಚ್ಚಿನ ರಾಜಕೀಯ ಅನುಭವವಿದೆ. ಕ್ಷೇತ್ರದಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಅವರಿಗೆ ತಮ್ಮದೇ ಮತಬ್ಯಾಂಕ್‌ ಇದೆ. ತಾಲ್ಲೂಕಿನ ನೀರಾವರಿ ಅಭಿವೃದ್ಧಿಗೆ ಅವರ ಕೊಡುಗೆ ದೊಡ್ಡದಾಗಿದೆ. ಈ ಹಿನ್ನೆಲೆಯಲ್ಲಿ ಮೈತ್ರಿಕೂಟದ ಗೆಲುವು ಪ್ರತಿಷ್ಠೆಯಾಗಿರುವುದರಿಂದ ಅಭ್ಯರ್ಥಿ ಆಯ್ಕೆ ಕುರಿತು ಸದ್ಯದಲ್ಲೇ ಎನ್‌ಡಿಎ ನಾಯಕರು ಮತ್ತು ಮುಖಂಡರ ಸಭೆ ನಡೆಸಿ, ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago