ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ನಿಖಿಲ್ ಕುಮಾರಸ್ವಾಮಿ ಸೋತಿರಬಹುದು. ಆದರೆ ಮುಂದಿನ ದಿನಗಳಲ್ಲಿ ಅದೇ ಕೇತ್ರದ ಜನರು ನಿಖಿಲ್ ಕೈ ಹಿಡಿಯಲಿದ್ದಾರೆ. ಚುನಾವಣೆ 15 ದಿನ ಇರುವಾಗ ನಿಖಿಲ್ ಪ್ರಚಾರಕ್ಕೆ ಹೋಗಿದ್ದರು. ಆದರೆ ಯೋಗೇಶ್ವರ್ ಕಳೆದ 6 ತಿಂಗಳಿನಿಂದ ಪ್ರಚಾರ ನಡೆಸಿದ್ದರು ಎಂದರು.
ಇನ್ನು ಕಾಂಗ್ರೆಸ್ನವರು ಸಿ.ಪಿ.ಯೋಗೇಶ್ವರ್ರನ್ನು ಕೈಕಾಲು ಕಟ್ಟಿ ಕರೆದುಕೊಂಡು ಹೋದರು. ಕಾಂಗ್ರೆಸ್ನಲ್ಲಿ ಸಿಪಿವೈಗೆ ಉಜ್ವಲ ಭವಿಷ್ಯ ನೀಡಲಿ. ಅವರನ್ನು ಮಂತ್ರಿ ಮಾಡಲಿ ಎಂದು ಲೇವಡಿ ಮಾಡಿದರು.
ಇನ್ನು ಚನ್ನಪಟ್ಟಣ ಚುನಾವಣಾ ಪ್ರಚಾರದಿಂದ ಅಂತರ ಕಾಯ್ದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವುದೇ ಅಂತರ ಕಾಯ್ದುಕೊಂಡಿಲ್ಲ. ಮನೆಯಲ್ಲಿ ಬಿದ್ದು ಕಾಲಿಗೆ ಪೆಟ್ಟಾಗಿತ್ತು. ಹೀಗಾಗಿ ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…