ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ನಿಖಿಲ್ ಕುಮಾರಸ್ವಾಮಿ ಸೋತಿರಬಹುದು. ಆದರೆ ಮುಂದಿನ ದಿನಗಳಲ್ಲಿ ಅದೇ ಕೇತ್ರದ ಜನರು ನಿಖಿಲ್ ಕೈ ಹಿಡಿಯಲಿದ್ದಾರೆ. ಚುನಾವಣೆ 15 ದಿನ ಇರುವಾಗ ನಿಖಿಲ್ ಪ್ರಚಾರಕ್ಕೆ ಹೋಗಿದ್ದರು. ಆದರೆ ಯೋಗೇಶ್ವರ್ ಕಳೆದ 6 ತಿಂಗಳಿನಿಂದ ಪ್ರಚಾರ ನಡೆಸಿದ್ದರು ಎಂದರು.
ಇನ್ನು ಕಾಂಗ್ರೆಸ್ನವರು ಸಿ.ಪಿ.ಯೋಗೇಶ್ವರ್ರನ್ನು ಕೈಕಾಲು ಕಟ್ಟಿ ಕರೆದುಕೊಂಡು ಹೋದರು. ಕಾಂಗ್ರೆಸ್ನಲ್ಲಿ ಸಿಪಿವೈಗೆ ಉಜ್ವಲ ಭವಿಷ್ಯ ನೀಡಲಿ. ಅವರನ್ನು ಮಂತ್ರಿ ಮಾಡಲಿ ಎಂದು ಲೇವಡಿ ಮಾಡಿದರು.
ಇನ್ನು ಚನ್ನಪಟ್ಟಣ ಚುನಾವಣಾ ಪ್ರಚಾರದಿಂದ ಅಂತರ ಕಾಯ್ದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವುದೇ ಅಂತರ ಕಾಯ್ದುಕೊಂಡಿಲ್ಲ. ಮನೆಯಲ್ಲಿ ಬಿದ್ದು ಕಾಲಿಗೆ ಪೆಟ್ಟಾಗಿತ್ತು. ಹೀಗಾಗಿ ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…