ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ನಿಖಿಲ್ ಕುಮಾರಸ್ವಾಮಿ ಸೋತಿರಬಹುದು. ಆದರೆ ಮುಂದಿನ ದಿನಗಳಲ್ಲಿ ಅದೇ ಕೇತ್ರದ ಜನರು ನಿಖಿಲ್ ಕೈ ಹಿಡಿಯಲಿದ್ದಾರೆ. ಚುನಾವಣೆ 15 ದಿನ ಇರುವಾಗ ನಿಖಿಲ್ ಪ್ರಚಾರಕ್ಕೆ ಹೋಗಿದ್ದರು. ಆದರೆ ಯೋಗೇಶ್ವರ್ ಕಳೆದ 6 ತಿಂಗಳಿನಿಂದ ಪ್ರಚಾರ ನಡೆಸಿದ್ದರು ಎಂದರು.
ಇನ್ನು ಕಾಂಗ್ರೆಸ್ನವರು ಸಿ.ಪಿ.ಯೋಗೇಶ್ವರ್ರನ್ನು ಕೈಕಾಲು ಕಟ್ಟಿ ಕರೆದುಕೊಂಡು ಹೋದರು. ಕಾಂಗ್ರೆಸ್ನಲ್ಲಿ ಸಿಪಿವೈಗೆ ಉಜ್ವಲ ಭವಿಷ್ಯ ನೀಡಲಿ. ಅವರನ್ನು ಮಂತ್ರಿ ಮಾಡಲಿ ಎಂದು ಲೇವಡಿ ಮಾಡಿದರು.
ಇನ್ನು ಚನ್ನಪಟ್ಟಣ ಚುನಾವಣಾ ಪ್ರಚಾರದಿಂದ ಅಂತರ ಕಾಯ್ದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವುದೇ ಅಂತರ ಕಾಯ್ದುಕೊಂಡಿಲ್ಲ. ಮನೆಯಲ್ಲಿ ಬಿದ್ದು ಕಾಲಿಗೆ ಪೆಟ್ಟಾಗಿತ್ತು. ಹೀಗಾಗಿ ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…