ರಾಜ್ಯ

ಉಪಚುನಾವಣೆ ಸಮರ: ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕರಿಸಿದ್ದೇವಾ? ಡಿಕೆಶಿಗೆ ಡಿಚ್ಚಿ ಕೊಟ್ಟ ಕುಮಾರಸ್ವಾಮಿ

ಮಂಡ್ಯ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕರಿಸಿದ್ದೇವಾ? ಎಂಬ ಹೇಳಿಕೆ ನೀಡಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ನಿನ್ನೆ ಡಿ.ಕೆ.ಶಿವಕುಮಾರ್‌ ಅವರು ನೀಡಿದ್ದ ಹೇಳಿಕೆ ಕುರಿತು ಪಾಂಡವಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ಟಿಕೆಟ್‌ ವಿಚಾರವಾಗಿ ಗೊಂದಲಗಳು ಏನಿಲ್ಲ. ಆದರೆ, ಯೋಗೇಶ್ವರ್‌ ಸಹ ಚುನಾವಣೆಗೆ ಸ್ಪರ್ಧಿಸಬೇಕು ಅಂತ ಹೇಳುತ್ತಿದ್ದಾರೆ. ನ್ಯಾಯವಾಗಿ ನೋಡುವುದಾದರೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ನಮ್ಮ ಪಕ್ಷಕ್ಕೆ ದೊರೆಯಬೇಕು. ಈಗಾಗಲೇ ಬಿಜೆಪಿ ಅವರು ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ.  ಡಿ.ಕೆ.ಶಿವಕುಮಾರ್‌ ಮಾತಿಗೆ ನಾನು ತಲೆಕೆಡಿಸಿಕೊಳ್ಳಲ್ಲ. ಚುನಾವಣೆ ಗೆಲ್ಲಲು ಏನು ನಿರ್ಧಾರ ಮಾಡಬೇಕೋ ಅದನ್ನೇ ನಮ್ಮ ಪಕ್ಷ ಮಾಡುತ್ತದೆ ಎಂದು ಡಿ.ಕೆ.ಶಿವಕುಮಾರ್‌ ವಿರುದ್ಧ ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

15 hours ago