ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಂದು ಅಬ್ಬರದ ಪ್ರಚಾರ ಆರಂಭಿಸಿದ್ದಾರೆ.
ಇಂದಿನಿಂದ ಅಬ್ಬರದ ಪ್ರಚಾರ ನಡೆಸುವ ಮೂಲಕ ಕಾಂಗ್ರೆಸ್ ನಾಯಕರಿಗೆ ಟಕ್ಕರ್ ಕೊಡಲು ನಿಖಿಲ್ ಕುಮಾರಸ್ವಾಮಿ ಮುಂದಾಗಿದ್ದು, ಹಳ್ಳಿ ಹಳ್ಳಿಯ ಮನೆಮನೆಗಳಿಗೂ ತೆರಳಿ ಪ್ರಚಾರ ನಡೆಸುತ್ತಿದ್ದಾರೆ.
ಮಾಕಳಿ ಗ್ರಾಮದಲ್ಲಿ ಪ್ರಚಾರ ನಡೆಸುವ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಕೈ ಜೋಡಿಸಿ ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ಳುತ್ತೇನೆ. ನನಗೆ ಒಂದೇ ಒಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.
ನನ್ನ ಕೊನೆಯ ಉಸಿರು ಇರುವರೆಗೂ ನಿಮ್ಮ ಜೊತೆ ಇರುತ್ತೇನೆ. ಈ ಬಾರಿ ನನಗೆ ಒಂದೇ ಒಂದು ಅವಕಾಶ ಮಾಡಿಕೊಡಿ. ಈ ಜಿಲ್ಲೆಗೂ ನಮಗೂ ಬಹಳ ನಂಟಿದೆ. ತಂದೆಯವರಾದ ಕುಮಾರಸ್ವಾಮಿಯವರು ದಲಿತರ, ಯುವಕರ ಹಾಗೂ ಅನ್ನದಾತರ ಪರ ಕೆಲಸ ಮಾಡಿದ್ದಾರೆ. ಕುಮಾರಣ್ಣ ಅವರನ್ನು ಸಿಎಂ ಮಾಡಿದ ಕೀರ್ತಿ ಚನ್ನಪಟ್ಟಣ ಕ್ಷೇತ್ರಕ್ಕೂ ಸಲ್ಲಬೇಕು. ಹಾಗಾಗಿ ಈ ಬಾರಿ ನನಗೆ ಅವಕಾಶ ಮಾಡಿಕೊಡಿ ಎಂದು ಕೈಮುಗಿದು ಬೇಡಿಕೊಂಡರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…