ರಾಜ್ಯ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಬಹುತೇಕ ಖಚಿತ..?

ಬೆಂಗಳೂರು : ಉಪಚುನಾವಣೆಗೂ ಮುನ್ನವೇ ಚನ್ನಪಟ್ಟಣ ಕ್ಷೇತ್ರದ ಅಖಾಡ ರಂಗೇರುತ್ತಿದೆ. ಒಂದು ಕಡೆ ಈಗಾಗಲೇ ಕಾಂಗ್ರೆಸ್‌ ಚುನಾವಣೆಗೆ  ತಯಾರಿ ನಡೆಸಿ ಕ್ಷೇತ್ರದಲ್ಲಿ ಕಾರ್ಯಕ್ರಮಗಳ ಮೇಲೆ ಕಾರ್ಯಕ್ರಮಗಳನ್ನು ಮಾಡಿ ಮತದಾರರನ್ನ ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಮತ್ತೊಂದು ಕಡೆ ಮೈತ್ರಿ ಅಭ್ಯರ್ಥಿ ಯಾರು ಆಗುತ್ತಾರೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ.

ಎಚ್‌ ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ  ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಉಪಚುನಾವಣೆ ಘೋಷಣೆಗೂ ಮುನ್ನವೇ ರಾಜಕೀಯ ಪಕ್ಷಗಳಿಂದ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಇದರ ಮಧ್ಯೆ ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿ ಸ್ಪರ್ಧೆ ಮಾಡುತ್ತದೆಯೋ ಅಥವಾ ಜೆಡಿಎಸ್‌ ಸ್ಪರ್ಧೆ ಮಾಡುತ್ತದೆ ಎಂಬ ಕುತೂಹಲ ಎರಡು ಪಕ್ಷಗಳ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಮೂಡುತ್ತಿದೆ. ಆದರೆ ನಿನ್ನೆಯ ಬೆಳವಣಿಗೆ ನೋಡಿದರೆ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾದಂತೆ ಕಾಣುತ್ತಿದೆ.

ಇದಕ್ಕೆ ಪುಷ್ಠಿ ಕೊಡುವಂತೆ ಜುಲೈ ೮ ರಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಜಿಲ್ಲೆಯ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಮಾಡಿದ್ದಾರೆ. ಸಭೆಯಲ್ಲಿ ಉಪಚುನಾವಣೆಯ ಸ್ಪರ್ಧೆ ಮತ್ತು ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮುಕ್ತವಾಗಿ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ನಡೆಸಿ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಇನ್ನು ಇದೇ ಸಭೆಯಲ್ಲಿ ಚನ್ನಪಟ್ಟಣದಿಂದ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿಗೆ ಕಾರ್ಯಕರ್ತರು ಮತ್ತು ಮುಖಂಡರು ಒತ್ತಡ ಹಾಕಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಉಪಚುನಾವಣೆಯಲ್ಲಿ ನಿಖಿಲ್‌ ಸ್ಪರ್ಧೆ ಮಾಡುವುದಿಲ್ಲ. ಬದಲಾಗಿ ಎನ್‌ ಡಿಎ ಅಭ್ಯರ್ಥಿ ಗೆಲ್ಲಬೇಕು. ಈ ನಿಟ್ಟಿನಲ್ಲಿ ನಿಖಿಲ್‌ ಕೆಲಸ ಮಾಡುತ್ತಾರೆ ಎಂಬ ಸಂದೇಶವನ್ನು ಕಾರ್ಯಕರ್ತರಿಗೆ ಕೊಟ್ಟಿದ್ದಾರೆ.

ಮತ್ತೊಂದು ಕಡೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿರುವ ಸಿ.ಪಿ ಯೋಗೇಶ್ವರ್‌ ಸಹ ಕುಮಾರಸ್ವಾಮಿ ಅವರ ಗ್ರೀನ್‌ ಸಿಗ್ನಲ್‌ ಗಾಗಿ ಕಾಯುತ್ತ ಕುಳಿತ್ತಿದ್ದಾರೆ. ಇದರ ಬೆನ್ನಲ್ಲೆ ಯಾರೇ ಅಭ್ಯರ್ಥಿ ಆದರೂ ಅಥವಾ ಸಿ.ಪಿ ಯೋಗೇಶ್ವರ್‌ ಅಭ್ಯರ್ಥಿ ಆದ್ರೂ ಬೆಂಬಲ ನೀಡುವಂತೆ ಕುಮಾರಸ್ವಾಮಿ ಕಾರ್ಯಕರ್ತರಿಗೆ ಸೂಚನೆ ಕೊಟ್ಟಿದ್ದಾರೆ. ಈ ವೇಳೆ ಸಿ.ಪಿ. ಯೋಗೇಶ್ವರ್‌ ಸ್ಪರ್ಧೆ ಮಾಡುವುದಾದರೆ ಜೆಡಿಎಸ್‌ ಚಿಹ್ನೆಯಿಂದ ಸ್ಪರ್ಧೆ ಮಾಡಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ರೆ ಗೆಲ್ಲಲು ಸಾಧ್ಯವಾಗುವುದಿಲ್ಲ. ಇದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಲಾಭ ಆಗುವ ಚಾನ್ಸಸ್‌ ಇರುತ್ತದೆ ಎಂದು ತಮ್ಮ ಅಭಿಪ್ರಾಯವನ್ನು ಮುಖಂಡರು ಎಚ್‌ ಡಿಕೆ ಗೆ ತಿಳಿಸಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಒಮ್ಮೆ ಸಿಪಿ ಯೋಗೇಶ್ವರ್‌ ನನ್ನ ಭೇಟಿ ಮಾಡಿ ಅವರೊಟ್ಟಿಗೆ ಮಾತುಕತೆ ನಡೆಸಿ ಎಂದು ಸಲಹೆ ಕೊಟ್ಟಿದ್ದಾರೆ.

ಒಟ್ಟಾರೆಯಾಗಿ ಈ ಎಲ್ಲಾ ಬೆಳವಣಿಗೆಗಳನ್ನ ಗಮನಿಸಿದರೆ ಚನ್ನಪಟ್ಟಣದಿಂದ ಜೆಡಿಎಸ್‌ ಅಭ್ಯರ್ಥಿ ಮತ್ತೊಮ್ಮೆ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದ್ದು, ಶೀಘ್ರದಲ್ಲೆ ಎಚ್‌ ಡಿ ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್‌ ರನ್ನ ಭೇಟಿ ಮಾಡಿ ಅಭ್ಯರ್ಥಿ ಹೆಸರು ಫೈನಲ್‌ ಮಾಡುವ ಸಾಧ್ಯತೆ ಇದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

11 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

11 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

12 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

12 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

12 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

13 hours ago