ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇತ್ತ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು ಅನುಭವಿಸಿದ್ದಾರೆ.
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು (ನ.23) ಹೊರಬಿದ್ದಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯೂ 20 ಸುತ್ತುಗಳಲ್ಲಿ ನಡೆದಿದೆ. ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ನಿಖಿಲ್, ಹಿನ್ನೆಡೆಯತ್ತ ಮುಖ ಮಾಡಿದರು.
ಹಾವು-ಏಣಿ ಆಟದಂತಿದ್ದ ಫಲಿತಾಂಶ 9ನೇ ಸುತ್ತಿನ ನಂತರ ಬದಲಾಯಿತು. ಇಲ್ಲಿಂದ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಸಿಪಿವೈ ಕೊನೆಯವರೆಗೂ ಉಳಿಸಿಕೊಂಡು 25, 357 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 1,12,388 ಮತಗಳನ್ನು ಪಡೆದರೆ, ಎನ್ಡಿಎ ಅಭ್ಯರ್ಥಿ ನಿಖಿಲ್ 87,031 ಮತಗಳನ್ನು ಪಡೆದಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಬಾಕಿಯಿದೆ.
ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾರ್ಷಿಕ…
ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ವಿರುದ್ಧ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು,…
ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ…
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಭಾರತದ ವಿಶ್ವಕಪ್ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ಕಪಿಲ್…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ರಾಜ್ಯದಲ್ಲಿ ದಿನದಿಂದ…