Categories: ರಾಜ್ಯ

ಚನ್ನಪಟ್ಟಣ ಸೋಲು: ನಿಖಿಲ್‌ ಫಸ್ಟ್‌ ರಿಯಾಕ್ಷನ್‌

ಚನ್ನಪಟ್ಟಣ: ಚುನಾವಣೆಯಲ್ಲಿ ಸೋತರು ಜನರ ಅಪಾರ ಪ್ರೀತಿ, ವಾತ್ಸಲ್ಯ ಸಿಕ್ಕಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್‌ ಕುಮಾರ್‌ಸ್ವಾಮಿ ತಿಳಿಸಿದ್ದಾರೆ.

ರಾಮನಗರದ ಬಿಡದಿಯಲ್ಲಿರುವ ತೋಟದ ಮನೆಯಲ್ಲಿ ಇಂದು( ನ.23) ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ. ನಾನು ಈ ಚುನಾವಣೆಯ ಸೋಲಿಂದ ಎದೆಗುಂದುವ ಪ್ರಶ್ನೆಯೇ ಇಲ್ಲ. ಈಗಾಗಲೇ 2 ಬಾರಿ ಚುನಾವಣೆಯಲ್ಲಿ ಸೋತಿರುವುದರಿಂದ ಗೆಲುವು-ಸೋಲನ್ನು ಸಮಾನವಾಗಿ ಸ್ವೀಕಾರ ಮಾಡುತ್ತೇನೆ. ಆದರೆ ಈ ಚುನಾವಣೆಯ ಫಲಿತಾಂಶ ಆಘಾತ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ಈ ಚುನಾವಣೆ ಬಯಸದೇ ಬಂದ ಭಾಗ್ಯವಾಗಿತ್ತು. ಆದರೆ ಫಲಿತಾಂಶದಲ್ಲಿ 87 ಸಾವಿರ ಮತಗಳು ಬಂದಿವೆ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪು ಅಂತಿಮ ತೀರ್ಪಾಗಿರುವುದರಿಂದ ಅದನ್ನು ಸ್ವೀಕರಿಸಲೆಬೇಕು. ಹೀಗಾಗಿ ಚುನಾವಣೆಯಲ್ಲಿ ಸೋತಿದ್ದರೂ ನಾನು ಈ ಜಿಲ್ಲೆಯ ಮಗನೆಂದು ಭಾವಿಸುತ್ತೇನೆ ಎಂದಿದ್ದಾರೆ.

ಚುನಾವಣೆಯ ವೇಳೆ ಶ್ರಮಿಸಿದ ಜೆಡಿಎಸ್‌ ಹಾಗೂ ಬಿಜೆಪಿ ಕಾರ್ಯಕರ್ತರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಎಚ್‌.ಡಿ.ದೇವೇಗೌಡರು ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನರು. ಹೀಗಾಗಿ ನಾನು ಈ ಜಿಲ್ಲೆಯಲ್ಲಿ ಜನಿಸಿಲ್ಲವಾದರೂ ಭಾವನಾತ್ಮಕ ಸಂಬಂಧವನ್ನು ಹೊಂದಿದ್ದು, ಸಹ ನಾನು ಕುಮಾರಸ್ವಾಮಿ ಅವರ ಜೊತೆ ಸೇರಿ ಜಿಲ್ಲೆಯ ಅಭಿವೃಧ್ಧಿ ಕಾರ್ಯಗಳಲ್ಲಿ ತೊಡಗುತ್ತೇನೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

12 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

13 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

13 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

15 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

15 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

15 hours ago