ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಟಿಕೆಟ್ ಬಗ್ಗೆ ತೀರ್ಮಾನ ಮಾಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಟಿಕೆಟ್ ಕುರಿತು ಬಿಜೆಪಿ-ಜೆಡಿಎಸ್ ವರಿಷ್ಠರು ದೆಹಲಿಯಲ್ಲಿ ತೀರ್ಮಾನ ಮಾಡುತ್ತಾರೆ. ಅಲ್ಲಿಯವರೆಗೂ ಎಲ್ಲರೂ ಕಾಯಲೇಬೇಕು ಎಂದು ಹೇಳಿದರು.
ನಾನು ಹಾಗೂ ಸಿ.ಪಿ.ಯೋಗೇಶ್ವರ್ ಅವರು ಪ್ರತ್ಯೇಕವಾಗಿ ಸಭೆ ನಡೆಸುತ್ತಾ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇವೆ. ಅವರು ಬಿಜೆಪಿ-ಜೆಡಿಎಸ್ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಯಾರಿಗೂ ಅಸಮಾಧಾನ ಅನ್ನೋದೆ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿ ಬರೀ ಓಲೈಕೆ ರಾಜಕಾರಣ ನಡೆಯುತ್ತಿದೆ. ಇದಕ್ಕೆ ಜನರೇ ಮುಂದಿನ ದಿನಗಳಲ್ಲಿ ಉತ್ತರ ಕೊಡುತ್ತಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಆದ್ದರಿಂದ ಎಲ್ಲಿಯೂ ಕೂಡ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಕಿಡಿಕಾರಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…