ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಅನುಸೂಯ ಸ್ಪರ್ಧಿಸುವುದಿಲ್ಲ ಎಂದು ಸಂಸದ ಡಾ.ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಅನಸೂಯ ಮಂಜುನಾಥ್ ಹೆಸರು ಕೇಳಿ ಬಂದಿದ್ದು, ಇದರ ಬಗ್ಗೆ ಹಲವಾರು ಗೊಂದಲಗಳು ಹುಟ್ಟಿಕೊಂಡಿವೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮವರೊಂದಿಗೆ ಮಾತನಾಡಿದ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಅನುಸೂಯ ಸ್ಪರ್ಧೆ ವಿಚಾರ ಸತ್ಯಕ್ಕೆ ದೂರವಾಗಿದೆ. ಅಲ್ಲದೇ, ನಮ್ಮ ಕುಟುಂಬ ಚುನಾವಣೆಗೆ ಸ್ಪರ್ಧಿಸಲು ಒಪ್ಪುವುದಿಲ್ಲ. ಹೀಗಾಗಿ ಯಾವುದೇ ಕಾರಣಕ್ಕೂ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ಬಗ್ಗೆ ಯಾವುದೇ ಚರ್ಚೆ ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ.





