Categories: ರಾಜ್ಯ

ಕುಮಾರಸ್ವಾಮಿ ತಮ್ಮ ಪ್ರತಿಷ್ಠೆಗೆ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ: ಸಿ.ಪಿ.ಯೋಗೇಶ್ವರ್‌ ಲೇವಡಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ ಎಂದು ನೂತನ ಶಾಸಕ ಸಿ.ಪಿ.ಯೋಗೇಶ್ವರ್‌ ಲೇವಡಿ ಮಾಡಿದ್ದಾರೆ.

ಚನ್ನಪಟ್ಟಣದಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಕುಮಾರಸ್ವಾಮಿ ಮನಸ್ಸು ಮಾಡಿದ್ದರೆ ಮಗನನ್ನು ಮಂಡ್ಯದಲ್ಲಿ ಎಂಪಿ ಚುನಾವಣೆಯಲ್ಲಿ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ, ಕೇಂದ್ರ ಸಚಿವರಾಗುವ ತವಕದಿಂದ ತಾವೇ ಅಲ್ಲಿ ಸ್ಪರ್ಧಿಸಿದ್ದರು. ಈಗ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಿ ಮಗನನ್ನು ಬಲಿಕೊಟ್ಟಿದ್ದಾರೆ ಎಂದು ಟೀಕಿಸಿದರು.

ಇನ್ನು ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್‌ ಸೋಲಿನ ಮೂಲಕ ಜೆಡಿಎಸ್‌ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದರು.

ದೇವೇಗೌಡರಿಗೆ ವಯಸ್ಸಾಗಿದೆ. ಆದ್ದರಿಂದ ಅವರನ್ನು ಜನ ತಿರಸ್ಕರಿಸಿದ್ದಾರೆ. ಈಗ ದೇವೇಗೌಡರು ವಿಶ್ರಾಂತ ಜೀವನ ನಡೆಸುವುದು ಸೂಕ್ತ ಎಂದರು.

ನಾನು ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಡಾ.ಮಂಜುನಾಥ್‌ ಪರ ಕೆಲಸ ಮಾಡಿದ್ದೆ. ಅದರಿಂದಾಗಿ ಡಿ.ಕೆ.ಸುರೇಶ್‌ಗೆ ಸೋಲಾಗಿತ್ತು. ಆದರೆ ಈ ಚುನಾವಣೆಯಲ್ಲಿ ಅವರಿಂದಲೇ ನನಗೆ ಗೆಲುವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

17 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

17 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

17 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

18 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

18 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

21 hours ago