ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್ರನ್ನು ಬಲಿಕೊಟ್ಟಿದ್ದಾರೆ ಎಂದು ನೂತನ ಶಾಸಕ ಸಿ.ಪಿ.ಯೋಗೇಶ್ವರ್ ಲೇವಡಿ ಮಾಡಿದ್ದಾರೆ.
ಚನ್ನಪಟ್ಟಣದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಕುಮಾರಸ್ವಾಮಿ ಮನಸ್ಸು ಮಾಡಿದ್ದರೆ ಮಗನನ್ನು ಮಂಡ್ಯದಲ್ಲಿ ಎಂಪಿ ಚುನಾವಣೆಯಲ್ಲಿ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ, ಕೇಂದ್ರ ಸಚಿವರಾಗುವ ತವಕದಿಂದ ತಾವೇ ಅಲ್ಲಿ ಸ್ಪರ್ಧಿಸಿದ್ದರು. ಈಗ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಿ ಮಗನನ್ನು ಬಲಿಕೊಟ್ಟಿದ್ದಾರೆ ಎಂದು ಟೀಕಿಸಿದರು.
ಇನ್ನು ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸೋಲಿನ ಮೂಲಕ ಜೆಡಿಎಸ್ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದರು.
ದೇವೇಗೌಡರಿಗೆ ವಯಸ್ಸಾಗಿದೆ. ಆದ್ದರಿಂದ ಅವರನ್ನು ಜನ ತಿರಸ್ಕರಿಸಿದ್ದಾರೆ. ಈಗ ದೇವೇಗೌಡರು ವಿಶ್ರಾಂತ ಜೀವನ ನಡೆಸುವುದು ಸೂಕ್ತ ಎಂದರು.
ನಾನು ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಡಾ.ಮಂಜುನಾಥ್ ಪರ ಕೆಲಸ ಮಾಡಿದ್ದೆ. ಅದರಿಂದಾಗಿ ಡಿ.ಕೆ.ಸುರೇಶ್ಗೆ ಸೋಲಾಗಿತ್ತು. ಆದರೆ ಈ ಚುನಾವಣೆಯಲ್ಲಿ ಅವರಿಂದಲೇ ನನಗೆ ಗೆಲುವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…