ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್ರನ್ನು ಬಲಿಕೊಟ್ಟಿದ್ದಾರೆ ಎಂದು ನೂತನ ಶಾಸಕ ಸಿ.ಪಿ.ಯೋಗೇಶ್ವರ್ ಲೇವಡಿ ಮಾಡಿದ್ದಾರೆ.
ಚನ್ನಪಟ್ಟಣದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಕುಮಾರಸ್ವಾಮಿ ಮನಸ್ಸು ಮಾಡಿದ್ದರೆ ಮಗನನ್ನು ಮಂಡ್ಯದಲ್ಲಿ ಎಂಪಿ ಚುನಾವಣೆಯಲ್ಲಿ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ, ಕೇಂದ್ರ ಸಚಿವರಾಗುವ ತವಕದಿಂದ ತಾವೇ ಅಲ್ಲಿ ಸ್ಪರ್ಧಿಸಿದ್ದರು. ಈಗ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಿ ಮಗನನ್ನು ಬಲಿಕೊಟ್ಟಿದ್ದಾರೆ ಎಂದು ಟೀಕಿಸಿದರು.
ಇನ್ನು ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸೋಲಿನ ಮೂಲಕ ಜೆಡಿಎಸ್ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದರು.
ದೇವೇಗೌಡರಿಗೆ ವಯಸ್ಸಾಗಿದೆ. ಆದ್ದರಿಂದ ಅವರನ್ನು ಜನ ತಿರಸ್ಕರಿಸಿದ್ದಾರೆ. ಈಗ ದೇವೇಗೌಡರು ವಿಶ್ರಾಂತ ಜೀವನ ನಡೆಸುವುದು ಸೂಕ್ತ ಎಂದರು.
ನಾನು ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಡಾ.ಮಂಜುನಾಥ್ ಪರ ಕೆಲಸ ಮಾಡಿದ್ದೆ. ಅದರಿಂದಾಗಿ ಡಿ.ಕೆ.ಸುರೇಶ್ಗೆ ಸೋಲಾಗಿತ್ತು. ಆದರೆ ಈ ಚುನಾವಣೆಯಲ್ಲಿ ಅವರಿಂದಲೇ ನನಗೆ ಗೆಲುವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…