Mysore
28
overcast clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ರಂಗೇರಿದ ಚನ್ನಪಟ್ಟಣ ಉಪಚುನಾವಣೆ ಕಣ: ಅಭ್ಯರ್ಥಿ ಯಾರೆಂಬುದೇ ಕುತೂಹಲ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿ ಯಾರಾಗ್ತಾರೆ ಎಂಬುದೇ ಈಗ ತೀವ್ರ ಕುತೂಹಲ ಮೂಡಿಸಿದೆ.

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಘೋಷಣೆ ಆಗಿಲ್ಲ. ಆದರೂ ಕೂಡ ಎಲ್ಲಾ ಪಕ್ಷಗಳು ಚುನಾವಣೆ ಬಗ್ಗೆ ತಲೆಕೆಡಿಸಿಕೊಂಡು ಹೇಗಾದರೂ ಮಾಡಿ ಚನ್ನಪಟ್ಟಣದಲ್ಲಿ ಗೆಲ್ಲಲೇಬೇಕು ಎಂದು ಹಠ ಹಿಡಿದು ಕುಳಿತಿವೆ.

ಹೀಗಿರುವಾಗ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಯಾರಾಗ್ತಾರೆ ಎಂಬುದೇ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್‌ ಹೆಸರು ಮುಂಚೂಣಿಯಲ್ಲಿದ್ದು, ಜೆಡಿಎಸ್‌ನಿಂದ ನಿಖಿಲ್‌ ಕುಮಾರಸ್ವಾಮಿ ಹೆಸರು ಮುನ್ನಲೆಗೆ ಬಂದಿದೆ. ಹೀಗಾಗಿ ಯಾರು ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂಬುದೇ ಈಗ ಎಲ್ಲರ ಪ್ರಶ್ನೆಯಾಗಿದೆ.

ಇನ್ನೇನು ಕೆಲವೇ ದಿನಗಳಲ್ಲಿ ಬಿಜೆಪಿ ಹೈಕಮಾಂಡ್‌ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಮೈತ್ರಿ ಟಿಕೆಟ್‌ ಸಿಗದಿದ್ದರೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಎಲ್ಲಾ ಮುನ್ಸೂಚನೆಗಳು ಕಾಣಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಗೆ ಹೈಕಮಾಂಡ್‌ ಅಳೆದು ತೂಗಿ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Tags:
error: Content is protected !!