ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರುತ್ತಿದ್ದು, ಕ್ಷೇತ್ರದ ಟಿಕೆಟ್ ಪಡೆಯಲು ಬಿಜೆಪಿ-ಜೆಡಿಎಸ್ ಮುಖಂಡರು ಪೈಪೋಟಿ ನಡೆಸುತ್ತಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಕಗ್ಗಂಟು ಮುಂದುವರಿದಿದ್ದು, ತಮ್ಮ ಪಕ್ಷಕ್ಕೆ ಟಿಕೆಟ್ ಪಡೆಯಲು ಬಿಜೆಪಿ-ಜೆಡಿಎಸ್ ಮುಖಂಡರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.
ಇದೀಗ ಉಪಚುನಾವಣೆ ಘೋಷಣೆಗೂ ಮೊದಲೇ ಮೈತ್ರಿ ಪಕ್ಷದಲ್ಲಿ ಬಿರುಕು ಮೂಡಿದ್ದು, ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಾಯಿಸಿದರೆ, ಬಿಜೆಪಿ ಮುಖಂಡರು ಸಿ.ಪಿ.ಯೋಗೇಶ್ವರ್ ಪರ ಬ್ಯಾಟ್ ಬೀಸಿದ್ದಾರೆ.
ಇನ್ನೂ ಕ್ಷೇತ್ರವನ್ನು ತಮ್ಮ ತೆಕ್ಕೆಯಲ್ಲೇ ಉಳಿಸಿಕೊಳ್ಳಲು ಪ್ಲಾನ್ ಮಾಡಿರುವ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ಒತ್ತಾಯ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಸಿ.ಪಿ.ಯೋಗೇಶ್ವರ್ ಅವರು, ಎನ್ಡಿಎ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮೌನ ವಹಿಸಿದ್ದು, ಉಪಚುನಾವಣೆಗೆ ಇನ್ನೂ ದಿನಾಂಕವೇ ಘೋಷಣೆಯಾಗಿಲ್ಲ ಎಂದು ಏನನ್ನೂ ಯೋಚಿಸದೇ ಅಭಿವೃದ್ಧಿ ಕೆಲಸಗಳತ್ತ ಚಿತ್ತ ಹರಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಗೆ ದಿನಾಂಕ ಘೋಷಣೆಯಾದರಷ್ಟೇ, ಕ್ಷೇತ್ರಕ್ಕೆ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕೂತು ಚರ್ಚೆ ನಡೆಸಿ ಒಮ್ಮತದ ನಿಲುವಿಗೆ ಬರಲಿದ್ದಾರೆ ಎನ್ನಲಾಗಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…