ಬೆಂಗಳೂರು: ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಆದ್ದರಿಂದ ಜೆಡಿಎಸ್ನವರಿಗೆ ಯಾರು ಬೇಕೋ ಅವರ ಹೆಸರನ್ನು ಘೋಷಣೆ ಮಾಡುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಜೆಡಿಎಸ್ ಕ್ಷೇತ್ರವಾದ್ದರಿಂದ ಅವರು ಯಾರಿಗೆ ಬೇಕೋ ಅವರ ಹೆಸರನ್ನು ಘೋಷಣೆ ಮಾಡಿಕೊಳ್ತಾರೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಚನ್ನಪಟ್ಟಣದಲ್ಲಿ ಜೆಡಿಎಸ್ನವರು ಹೆಸರನ್ನು ಘೋಷಣೆ ಮಾಡುತ್ತಾರೆ ಎಂದಿದ್ದಾರೆ. ಹಾಗಾಗಿ ಜೆಡಿಎಸ್ನವರೇ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರೆಂದು ಘೋಷಣೆ ಮಾಡುತ್ತಾರೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈಗಾಗಲೇ ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹಾಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್ನವರು ಅಭ್ಯರ್ಥಿ ಘೋಷಣೆ ಮಾಡಿಕೊಳ್ಳಲಿ. ಎರಡೂ ಪಕ್ಷಗಳು ಸೇರಿ ಮೂರು ಕ್ಷೇತ್ರಗಳನ್ನು ಗೆಲ್ಲೋದಕ್ಕೆ ಶ್ರಮ ವಹಿಸುತ್ತೇವೆ ಎಂದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…