ಚಿಕ್ಕೋಡಿ : ಮುಖ್ಯಮಂತ್ರಿ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನ ಸೃಷ್ಠಿ ಮಾಡುವ ವಿಚಾರ ರಾಜ್ಯ ಕಾಂಗ್ರೆಸ್ ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನವನ್ನು ಬಿಟ್ಟು ಕೊಡುವಂತೆ ನಿನ್ನೆ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೆ ಇದೀಗ ವಿವಿಧ ಸಮುದಾಯದ ಸ್ವಾಮೀಜಿಗಳು ಸಿಎಂ ಬದಲಾವಣೆಗೆ ಬಗ್ಗೆ ಹೇಳಿಕೆಗಳನ್ನ ಕೊಡಲು ಶುರು ಮಾಡಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದಲ್ಲಿ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.
ತಾಲೂಕಿನ ಯಡೂರ ಗ್ರಾಮದಲ್ಲಿ ಈ ವಿಚಾರವಾಗಿ ಮಾತನಾಡಿದ ಶ್ರೀಶೈಲ ಸ್ವಾಮೀಜಿ, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನ ಹೆಚ್ಚುವರಿ ಮಾಡಿದರೆ ಲಿಂಗಾಯತರಿಗೆ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಎಂ.ಬಿ ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್ ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ಕೊಡಬೇಕು. ಕಾಶಿ, ಉಜ್ಜಯಿನಿ ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…