ಬೆಂಗಳೂರು: ನಟ ದರ್ಶನ್ ಅವರಿಂದ ನಡೆಯಲಾಗಿದೆ ಎನ್ನಲಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ತನಿಖೆ ಅಂತಿಮ ಘಟ್ಟ ತಲುಪಿರುವುದಾಗಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ.
ಈ ಸಂಬಂಧ ಶುಕ್ರವಾರ (ಆ.23) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪ್ರಕರಣದ ತನಿಖೆ ಅಂತಿಮ ಘಟ್ಟ ತಲುಪಿದ್ದು, ಆರೋಪ ಪಟ್ಟಿಯನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಎಲ್ಲಾ ದಾಖಲಾತಿಗಳು ಕಾಮಾಕ್ಷಿ ಪಾಳ್ಯ ಪೊಲೀಸರ ಕೈ ಸೇರಿದೆ. ಎಫ್ಎಸ್ಎಲ್ ವರದಿಗಳು ಮಾತ್ರ ಬಾಕಿಯಿದ್ದು, ಬಳಿಕ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದರು.
ಇನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ಚಿಕ್ಕಣ್ಣ, ಆರೋಪಿ ದರ್ಶನ್ ಅವರನ್ನು ಭೇಟಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…