ಮೈಸೂರು : ಮೇ.20 ಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷಗಳು ತುಂಬಲಿದ್ದು, ಇದರ ಬೆನ್ನಲ್ಲೇ ಸಾಧನಾ ಸಮಾವೇಶಕ್ಕೆ ಕೈಪಡೆ ಸಿದ್ಧತೆ ನಡೆಸುತ್ತಿರುವಂತಯೇ ಸಚಿವ ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.
ರಾಜ್ಯ ಸರ್ಕಾರ ʼಸಮರ್ಪಣೆ ಸಂಕಲ್ಪ ಸಮಾವೇಶʼವನ್ನು ಹೊಸಪೇಟೆಯಲ್ಲಿ ನಾಳೆ ಆಯೋಜಿಸಿದೆ. ಜಿಲ್ಲಾಡಳಿತ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಸುತ್ತಿದೆ.
ಸಂಪುಟ ಬದಲಾವಣೆಗೇ ಮೊದಲಿನಿಂದಲೂ ಕೂಗು ಕೇಳಿಬರುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಕೂಡ ಈ ಹಿಂದೆ ತಮ್ಮ ಭಾಷಣದಲ್ಲಿ ಸಂಪುಟ ಪುನಾರಚನೆ ಸುಳಿವು ನೀಡಿದ್ದರು. ಆದರೆ ಯಾವುದೇ ಬೆಳವಣಿಗೆಗಳು ನಡೆದಿರಲಿಲ್ಲ. ಇದೀಗ ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬುತ್ತಿದ್ದಂತೆ ಸಂಪುಟ ಪುನಾರಚನೆ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ.
ಸಚಿವ ಸಂಪುಟಕ್ಕೆ ಸೇರ್ಪಡೆ ಆಗಬೇಕು ಎಂಬ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಿಎಂ ಹಾಗೂ ಡಿಸಿಎಂ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಈಗಾಗಲೇ ಹೈಕಮಾಂಡ್ ಜೊತೆ ಲಾಬಿ ನಡೆಸುತ್ತಿದ್ದಾರೆ.
ಸಂಪುಟದಲ್ಲಿ ಕಾರ್ಯಕ್ಷಮತೆ ತೋರದ 12 ಸಚಿವರನ್ನು ಹೈಕಮಾಂಡ್ ಅನುಮೋದನೆ ಪಡೆದ ಬಳಿಕ ಕೈಬಿಡುವ ಸಾಧ್ಯತೆಗಳಿವೆ. ಜೊತೆಗೆ ಇನ್ನೀತರರಿಗೂ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…