ರಾಜ್ಯ

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ ಮನೆ ಮುಂದೆ ಸಂತ್ರಸ್ತ ಯುವತಿ ಗಲಾಟೆ ಮಾಡಿದ್ದಾರೆ. ಸದ್ಯ ಈ ಘಟನೆ ನಡೆದಿರುವುದು ಚಿಕ್ಕಮಗಳೂರು ನಗರದಲ್ಲಿ.

10 ವರ್ಷಗಳಿಂದ ಪ್ರೀತಿಸಿದ ಯುವತಿಗೆ ಮೋಸ ಮಾಡಿ, ಆಕೆಯಿಂದ ಹಣ ಪಡೆದು, ಈಗ ಬೇರೆ ಮದುವೆಗೆ ಸಿದ್ಧನಾಗಿದ್ದ, ತಾನು ವಿಚ್ಛೇದಿತ ಎಂಬ ಸತ್ಯ ಮುಚ್ಚಿಟ್ಟು ಈಗ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದ ಆತ. ಇದರಿಂದ ಆಕ್ರೋಶಗೊಂಡ ಸಂತ್ರಸ್ತ ಯುವತಿ, ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿರುವ ಯುವಕನ ಮನೆ ಮುಂದೆ ನ್ಯಾಯಕ್ಕಾಗಿ ಗಲಾಟೆ ನಡೆಸಿದ್ದಾರೆ.

ಡಿವೋರ್ಸ್ ಆದ ವಿಷಯ ಮುಚ್ಚಿಟ್ಟು ಪ್ರೀತಿ!
ಹಾಸನ ಜಿಲ್ಲೆಯ ಬೇಲೂರು ಮೂಲದವರಾದ ಅಶ್ವಿನಿ ಎಂಬ ಯುವತಿ, ಕಲ್ಯಾಣ ನಗರದ ನಿವಾಸಿ ಶರತ್ ಎಂಬ ಯುವಕನನ್ನು ಕಳೆದ 10 ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ನಡುವೆ ಶರತ್‌ನು ಅಶ್ವಿನಿಯಿಂದ 4.5 ಲಕ್ಷ ರೂಪಾಯಿ ಹಣವನ್ನೂ ಪಡೆದಿದ್ದ ಎನ್ನಲಾಗಿದೆ. ಆದರೆ, ಶರತ್‌ಗೆ ಈ ಮೊದಲೇ ಮದುವೆಯಾಗಿ ಕೇವಲ ಎರಡು ತಿಂಗಳಲ್ಲಿ ವಿಚ್ಛೇದನ ಆಗಿರುವ ವಿಷಯವನ್ನು ಮುಚ್ಚಿಟ್ಟು ಅಶ್ವಿನಿಯನ್ನು ಪ್ರೀತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಮದುವೆಯಾಗುವುದಾಗಿ ಅಶ್ವಿನಿಯ ತಾಯಿಯ ಬಳಿಗೂ ಹೋಗಿ ಭರವಸೆ ನೀಡಿದ್ದ ಕಾರಣ, ಅಶ್ವಿನಿ ತಾಯಿ ಮಗಳಿಗೆ ಬಂದಿದ್ದ ಐದು ಉತ್ತಮ ಮದುವೆ ಸಂಬಂಧಗಳನ್ನು ನಿರಾಕರಿಸಿದ್ದರು.

ಈ ವಿಚಾರವಾಗಿ ಅಶ್ವಿನಿ ಈಗಾಗಲೇ ಆರೋಪಿ ಶರತ್‌ ವಿರುದ್ಧ ಅಟ್ರಾಸಿಟಿ ಸೇರಿದಂತೆ ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ ಶರತ್ ಎಲ್ಲಾ ಕೇಸ್‌ಗಳಿಗೂ ನ್ಯಾಯಾಲಯದಿಂದ ಸ್ಟೇ ತಂದು ಬೇರೆ ಮದುವೆಯಾಗಲು ಮುಂದಾಗಿರುವುದು ಆಶ್ಚರ್ಯ ತಂದಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago