ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ ಮನೆ ಮುಂದೆ ಸಂತ್ರಸ್ತ ಯುವತಿ ಗಲಾಟೆ ಮಾಡಿದ್ದಾರೆ. ಸದ್ಯ ಈ ಘಟನೆ ನಡೆದಿರುವುದು ಚಿಕ್ಕಮಗಳೂರು ನಗರದಲ್ಲಿ.
10 ವರ್ಷಗಳಿಂದ ಪ್ರೀತಿಸಿದ ಯುವತಿಗೆ ಮೋಸ ಮಾಡಿ, ಆಕೆಯಿಂದ ಹಣ ಪಡೆದು, ಈಗ ಬೇರೆ ಮದುವೆಗೆ ಸಿದ್ಧನಾಗಿದ್ದ, ತಾನು ವಿಚ್ಛೇದಿತ ಎಂಬ ಸತ್ಯ ಮುಚ್ಚಿಟ್ಟು ಈಗ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದ ಆತ. ಇದರಿಂದ ಆಕ್ರೋಶಗೊಂಡ ಸಂತ್ರಸ್ತ ಯುವತಿ, ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿರುವ ಯುವಕನ ಮನೆ ಮುಂದೆ ನ್ಯಾಯಕ್ಕಾಗಿ ಗಲಾಟೆ ನಡೆಸಿದ್ದಾರೆ.
ಡಿವೋರ್ಸ್ ಆದ ವಿಷಯ ಮುಚ್ಚಿಟ್ಟು ಪ್ರೀತಿ!
ಹಾಸನ ಜಿಲ್ಲೆಯ ಬೇಲೂರು ಮೂಲದವರಾದ ಅಶ್ವಿನಿ ಎಂಬ ಯುವತಿ, ಕಲ್ಯಾಣ ನಗರದ ನಿವಾಸಿ ಶರತ್ ಎಂಬ ಯುವಕನನ್ನು ಕಳೆದ 10 ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ನಡುವೆ ಶರತ್ನು ಅಶ್ವಿನಿಯಿಂದ 4.5 ಲಕ್ಷ ರೂಪಾಯಿ ಹಣವನ್ನೂ ಪಡೆದಿದ್ದ ಎನ್ನಲಾಗಿದೆ. ಆದರೆ, ಶರತ್ಗೆ ಈ ಮೊದಲೇ ಮದುವೆಯಾಗಿ ಕೇವಲ ಎರಡು ತಿಂಗಳಲ್ಲಿ ವಿಚ್ಛೇದನ ಆಗಿರುವ ವಿಷಯವನ್ನು ಮುಚ್ಚಿಟ್ಟು ಅಶ್ವಿನಿಯನ್ನು ಪ್ರೀತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಮದುವೆಯಾಗುವುದಾಗಿ ಅಶ್ವಿನಿಯ ತಾಯಿಯ ಬಳಿಗೂ ಹೋಗಿ ಭರವಸೆ ನೀಡಿದ್ದ ಕಾರಣ, ಅಶ್ವಿನಿ ತಾಯಿ ಮಗಳಿಗೆ ಬಂದಿದ್ದ ಐದು ಉತ್ತಮ ಮದುವೆ ಸಂಬಂಧಗಳನ್ನು ನಿರಾಕರಿಸಿದ್ದರು.
ಈ ವಿಚಾರವಾಗಿ ಅಶ್ವಿನಿ ಈಗಾಗಲೇ ಆರೋಪಿ ಶರತ್ ವಿರುದ್ಧ ಅಟ್ರಾಸಿಟಿ ಸೇರಿದಂತೆ ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ ಶರತ್ ಎಲ್ಲಾ ಕೇಸ್ಗಳಿಗೂ ನ್ಯಾಯಾಲಯದಿಂದ ಸ್ಟೇ ತಂದು ಬೇರೆ ಮದುವೆಯಾಗಲು ಮುಂದಾಗಿರುವುದು ಆಶ್ಚರ್ಯ ತಂದಿದೆ.
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…