ಬೆಂಗಳೂರು: ಐದು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ಬಾಸ್ 11 ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಬಿಗ್ಬಾಸ್ ಶೋನಿಂದ ಹೊರಗೆ ಬಂದು ಎಸಿಎಂಎಂ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದಾರೆ.
ವಂಚನೆ ಕೇಸ್ ಹಿನ್ನೆಲೆ ಚೈತ್ರಾ ಕುಂದಾಪುರ ಬಿಗ್ಬಾಸ್ ಹೊರಬಂದು ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಇವರೊಂದಿಗೆ ಶ್ರೀಕಾಂತ್ ಸೇರಿದಂತೆ ಮೂವರು ಆರೋಪಿಗಳು ವಿಚಾರಣೆ ಎದುರಿಸಿದ್ದಾರೆ. ಈ ಬಗ್ಗೆ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು 2025ರ ಜನವರಿ.13ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ.
ಏನಿದು ಪ್ರಕರಣ?
ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ವಂಚಿಸಿ 5 ಕೋಟಿ ಚೈತ್ರಾ ಕುಂದಾಪುರ ಅವರು ರೂಪಾಯಿಗಳನ್ನು ಪಡೆದಿದ್ದರು ಎನ್ನಲಾಗಿತ್ತು. ಈ ವಂಚನೆ ಆರೋಪದ ಮೇಲೆ ಚೈತ್ರಾ ಕುಂದಾಪುರ, ಶ್ರೀಕಾಂತ್ ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಇಂದು ಎಸಿಎಂಎಂ ಕೋರ್ಟ್ಗೆ ಹಾಜರಾಗಿ ವಿಚಾರಣೆ ನಡೆಸಿದ್ದರು. ವಿಚಾರಣೆ ಮುಗಿದ ಬಳಿಕ ವಾಪಾಸ್ ಬಿಗ್ಬಾಸ್ ಮರಳಿದ್ದಾರೆ.
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…