ಬೆಂಗಳೂರು: ರಾಜ್ಯದಲ್ಲಿ ತುಪ್ಪ ಉತ್ಪಾದನೆಯ ಗುಣಮಟ್ಟ ಪರಿಶೀಲನೆಗೆ ನಿರ್ಧಾರ ಮಾಡಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಅವರು, ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್ಗಳ ಪರಿಶೀಲನೆಗೆ ನಿರ್ಧಾರ ಮಾಡಲಾಗಿದೆ.
ಸದ್ಯಕ್ಕೆ ಪ್ರಸಾದಗಳ ಸ್ಯಾಂಪಲ್ ಪರಿಶೀಲನೆ ಇಲ್ಲ. ಸದ್ಯ ತುಪ್ಪ ಪರಿಶೀಲನೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದರು.
ಈ ಬಗ್ಗೆ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ಸೂಚನೆ ನೀಡಿದ್ದೇನೆ.
ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ. ಎಲ್ಲಾ ಸ್ಯಾಂಪಲ್ಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲು ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದರು.
ಇನ್ನು ತಿರುಪತಿ ಲಡ್ಡು ವಿಚಾರದಲ್ಲಿ ಈ ರೀತಿ ಇದೆ ಅಂತ ಗೊತ್ತಾದಾಗ ಯಾರನ್ನು ನಂಬಬೇಕು ಎನ್ನುವ ಪ್ರಶ್ನೆ ಎದುರಾಗಿದೆ. ನಾಳೆ ದೇವಸ್ಥಾನಗಳಲ್ಲಿ ಕೊಡುವ ಪ್ರಸಾದ ಸ್ವೀಕರಿಸದೇ ಇರುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಬೇಸರ ವ್ಯಕ್ತಪಡಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…