ಬೆಂಗಳೂರು: ರಾಜ್ಯದಲ್ಲಿ ತುಪ್ಪ ಉತ್ಪಾದನೆಯ ಗುಣಮಟ್ಟ ಪರಿಶೀಲನೆಗೆ ನಿರ್ಧಾರ ಮಾಡಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಅವರು, ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್ಗಳ ಪರಿಶೀಲನೆಗೆ ನಿರ್ಧಾರ ಮಾಡಲಾಗಿದೆ.
ಸದ್ಯಕ್ಕೆ ಪ್ರಸಾದಗಳ ಸ್ಯಾಂಪಲ್ ಪರಿಶೀಲನೆ ಇಲ್ಲ. ಸದ್ಯ ತುಪ್ಪ ಪರಿಶೀಲನೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದರು.
ಈ ಬಗ್ಗೆ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ಸೂಚನೆ ನೀಡಿದ್ದೇನೆ.
ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ. ಎಲ್ಲಾ ಸ್ಯಾಂಪಲ್ಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲು ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದರು.
ಇನ್ನು ತಿರುಪತಿ ಲಡ್ಡು ವಿಚಾರದಲ್ಲಿ ಈ ರೀತಿ ಇದೆ ಅಂತ ಗೊತ್ತಾದಾಗ ಯಾರನ್ನು ನಂಬಬೇಕು ಎನ್ನುವ ಪ್ರಶ್ನೆ ಎದುರಾಗಿದೆ. ನಾಳೆ ದೇವಸ್ಥಾನಗಳಲ್ಲಿ ಕೊಡುವ ಪ್ರಸಾದ ಸ್ವೀಕರಿಸದೇ ಇರುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಬೇಸರ ವ್ಯಕ್ತಪಡಿಸಿದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…