ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್ 4ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್ ಅವರೊಂದಿಗೆ ಸಭೆ ನಡೆಸಿದ ಸಚಿವರು, ಚೀತಾಗಳಿಗಾಗಿಯೇ ಬನ್ನೇರುಘಟ್ಟ ಮೃಗಾಲಯದಲ್ಲಿ ಪ್ರತ್ಯೇಕವಾಗಿ ಸಿದ್ಧಪಡಿಸಿರುವ ಆವರಣದಲ್ಲಿ ಈ ಚಿತಾಗಳನ್ನು ಬಿಡಲಾಗುವುದು ಎಂದರು.
ವನ್ಯಜೀವಿ ವಿನಿಮಯ ಕಾರ್ಯಕ್ರಮದ ಭಾಗವಾಗಿ ಏ.18ರ ಮಧ್ಯರಾತ್ರಿ ದ.ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಈ ಹೊಸ ಅತಿಥಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬರಮಾಡಿಕೊಂಡಿದ್ದರು.
ಈ ಚೀತಾಗಳು ಬನ್ನೇರುಘಟ್ಟ ಪರಿಸರ, ವಾತಾವರಣ, ಹವಾಮಾನಕ್ಕೆ ಹೊಂದಿಕೊಳ್ಳಲು ಪ್ರತ್ಯೇಕವಾಗಿ ಇಡಲಾಗಿತ್ತು. ಮತ್ತು ಇವುಗಳ ಆರೋಗ್ಯದ ಬಗ್ಗೆ ಸತತ ನಿಗಾ ಇಡಲಾಗಿತ್ತು. ಪ್ರಸ್ತುತ ಚಿತಾಗಳು ಸಂಪೂರ್ಣ ಆರೋಗ್ಯವಾಗಿದೆ ಎಂಬ ಮಾಹಿತಿ ಪಡೆದ ಸಚಿವರು, ಜೂನ್ ಮೊದಲ ವಾರದಲ್ಲಿ ಪ್ರವಾಸಿಗರಿಗೆ ಚೀತಾ ನೋಡಲು ಅವಕಾಶ ಕಲ್ಪಿಸುವಂತೆ ನಿರ್ದೇಶಿಸಿದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…