ಧಾರವಾಡ: ಕೃಷಿ ಪದವೀಧರರು ತಮ್ಮ ತಾಂತ್ರಿಕ ಜ್ಞಾನ ಬಳಸಿ ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯದ 37ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೃಷಿ ಪದವೀಧರರು ಉದ್ಯೋಗ ಅರಸುವ ಬದಲು ಕೆಲಸ ನೀಡುವವರಾಗಿ ಬೆಳೆಯಬೇಕು ಎಂದರು.
ಕೃಷಿ ಕ್ಷೇತ್ರದಲ್ಲಿ ಮೌಲ್ಯವರ್ಧನೆ ಹಾಗೂ ಅಭಿವೃದ್ಧಿಗೆ ವ್ಯಾಪಕ ಅವಕಾಶ ಇದೆ. ಕೃಷಿ ಪದವಿಧರರು ತಮ್ಮ ಕೌಶಲ್ಯವನ್ನು ಈ ಕ್ಷೇತ್ರದ ವಿಕಾಸಕ್ಕೆ ಬಳಸಬೇಕು ಸಲಹೆ ನೀಡಿದರು.
ಧಾರವಾಡ ಕೃಷಿ ವಿ.ವಿ ದೇಶದ ಶ್ರೇಷ್ಠ ವಿಶ್ವವಿದ್ಯಾಲಗಳಲ್ಲಿ ಒಂದಾಗಿದ್ದು ಹೊಸ ಹೊಸ ಸಂಶೋಧನೆಗಳ ಮೂಲಕ ಕೃಷಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿರುವುದು ಪ್ರಶಂಸನೀಯ. ವಿಶ್ವವಿದ್ಯಾಲಯಗಳು ರೈತರಿಗೆ ಆತ್ಮವಿಶ್ವಾಸ ತುಂಬುವ ಜೊತೆಗೆ ವೈಜ್ಞಾನಿಕ, ತಾಂತ್ರಿಕ ನೆರವು ಒದಗಿಸಬೇಕು ಎಂದು ಸೂಚನೆ ನೀಡಿದರು.
ರಾಜ್ಯ ಸರ್ಕಾರ ಸದಾ ರೈತ ಪರವಾಗಿದೆ. ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ಅನೇಕ ಪರಿಣಾಮಕಾರಿ ಯೋಜನೆ ಜಾರಿ ತಂದಿದೆ ಎಂದು ಅವರು ವಿವರಿಸಿದರು.
ಸಿರಿ ಧಾನ್ಯಗಳ ಪ್ರೋತ್ಸಾಹ ಕಾರ್ಯಕ್ರಮಗಳಿಂದ ದೊಡ್ಡ ಯಶಸ್ಸು ಕಾಣುತ್ತಿದೆ. ನೂರಾರು ಹೊಸ ಉದ್ಯಮ ಪ್ರಾರಂಭವಾಗಿ ಹೀಗೆ ಎಲ್ಲಾ ಕೃಷಿ ಉತ್ಪನ್ನಗಳಲ್ಲಿ ಹೊಸ ಆವಿಷ್ಕಾರ ಮತ್ತು ಬ್ರಾಂಡಿಗ್ ಅಗಬೇಕಿದೆ ಎಂದು ಹೇಳಿದರು.
ಅಲ್ಲದೆ ಈ ವರ್ಷದ ಧಾರವಾಡ ಕೃಷಿ ವಿವಿ ವಿದ್ಯಾರ್ಥಿನಿ ಕುಮಾರಿ ಸೌಭಾಗ್ಯ ಬೀಳಗಿಮಠ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 101 ನೇ ರಾಂಕ್ ಗಳಿಸಿರುವುದು ರಾಜ್ಯಕ್ಕೆ ಹೆಮ್ಮೆ ತಂದಿದೆ ಎಂದು ಕೃಷಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಧಾರವಾಡದ ಕೃಷಿ ವಿ.ವಿಯ 37ನೇ ಘಟಿಕೊತ್ಸವದಲ್ಲಿ 69 ಪಿ.ಹೆಚ್.ಡಿ, 237 ಸ್ನಾತಕೋತ್ತರ ಹಾಗೂ 627 ಸ್ನಾತಕ ಪದವಿ ಸೇರಿದಂತೆ 933 ಅಭ್ಯರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…