ರಾಜ್ಯ

ಕೃಷಿ ಪದವೀಧರರು ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು: ಎನ್ ಚಲುವರಾಯಸ್ವಾಮಿ

ಧಾರವಾಡ: ಕೃಷಿ ಪದವೀಧರರು ತಮ್ಮ ತಾಂತ್ರಿಕ ಜ್ಞಾನ ಬಳಸಿ ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ 37ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೃಷಿ ಪದವೀಧರರು ಉದ್ಯೋಗ ಅರಸುವ ಬದಲು ಕೆಲಸ ನೀಡುವವರಾಗಿ ಬೆಳೆಯಬೇಕು ಎಂದರು.

ಕೃಷಿ ಕ್ಷೇತ್ರದಲ್ಲಿ ಮೌಲ್ಯವರ್ಧನೆ ಹಾಗೂ ಅಭಿವೃದ್ಧಿಗೆ ವ್ಯಾಪಕ ಅವಕಾಶ ಇದೆ. ಕೃಷಿ ಪದವಿಧರರು ತಮ್ಮ ಕೌಶಲ್ಯವನ್ನು ಈ ಕ್ಷೇತ್ರದ ವಿಕಾಸಕ್ಕೆ ಬಳಸಬೇಕು ಸಲಹೆ ನೀಡಿದರು.

ಧಾರವಾಡ ಕೃಷಿ ವಿ.ವಿ ದೇಶದ ಶ್ರೇಷ್ಠ ವಿಶ್ವವಿದ್ಯಾಲಗಳಲ್ಲಿ ಒಂದಾಗಿದ್ದು ಹೊಸ ಹೊಸ ಸಂಶೋಧನೆಗಳ ಮೂಲಕ ಕೃಷಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿರುವುದು ಪ್ರಶಂಸನೀಯ. ವಿಶ್ವವಿದ್ಯಾಲಯಗಳು ರೈತರಿಗೆ ಆತ್ಮವಿಶ್ವಾಸ ತುಂಬುವ ಜೊತೆಗೆ ವೈಜ್ಞಾನಿಕ, ತಾಂತ್ರಿಕ ನೆರವು ಒದಗಿಸಬೇಕು ಎಂದು ಸೂಚನೆ ನೀಡಿದರು.

ರಾಜ್ಯ ಸರ್ಕಾರ ಸದಾ ರೈತ ಪರವಾಗಿದೆ. ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ಅನೇಕ‌ ಪರಿಣಾಮಕಾರಿ ಯೋಜನೆ ಜಾರಿ ತಂದಿದೆ ಎಂದು ಅವರು ವಿವರಿಸಿದರು.

ಸಿರಿ ಧಾನ್ಯಗಳ ಪ್ರೋತ್ಸಾಹ ಕಾರ್ಯಕ್ರಮಗಳಿಂದ ದೊಡ್ಡ ಯಶಸ್ಸು ಕಾಣುತ್ತಿದೆ. ನೂರಾರು ಹೊಸ ಉದ್ಯಮ ಪ್ರಾರಂಭವಾಗಿ ಹೀಗೆ ಎಲ್ಲಾ ಕೃಷಿ ಉತ್ಪನ್ನಗಳಲ್ಲಿ ಹೊಸ ಆವಿಷ್ಕಾರ ಮತ್ತು ಬ್ರಾಂಡಿಗ್ ಅಗಬೇಕಿದೆ ಎಂದು ಹೇಳಿದರು.

ಅಲ್ಲದೆ ಈ ವರ್ಷದ ಧಾರವಾಡ ಕೃಷಿ ವಿವಿ ವಿದ್ಯಾರ್ಥಿನಿ ಕುಮಾರಿ ಸೌಭಾಗ್ಯ ಬೀಳಗಿ‌ಮಠ ಯು.ಪಿ‌.ಎಸ್.ಸಿ ಪರೀಕ್ಷೆಯಲ್ಲಿ 101 ನೇ ರಾಂಕ್ ಗಳಿಸಿರುವುದು ರಾಜ್ಯಕ್ಕೆ ಹೆಮ್ಮೆ ತಂದಿದೆ ಎಂದು ಕೃಷಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಧಾರವಾಡದ ಕೃಷಿ ವಿ.ವಿಯ 37ನೇ ಘಟಿಕೊತ್ಸವದಲ್ಲಿ 69 ಪಿ.ಹೆಚ್.ಡಿ, 237 ಸ್ನಾತಕೋತ್ತರ ಹಾಗೂ 627 ಸ್ನಾತಕ ಪದವಿ ಸೇರಿದಂತೆ 933 ಅಭ್ಯರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

2 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

2 hours ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

2 hours ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

2 hours ago