ರಾಜ್ಯ

ಕೃಷಿ ಪದವೀಧರರು ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು: ಎನ್ ಚಲುವರಾಯಸ್ವಾಮಿ

ಧಾರವಾಡ: ಕೃಷಿ ಪದವೀಧರರು ತಮ್ಮ ತಾಂತ್ರಿಕ ಜ್ಞಾನ ಬಳಸಿ ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ 37ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೃಷಿ ಪದವೀಧರರು ಉದ್ಯೋಗ ಅರಸುವ ಬದಲು ಕೆಲಸ ನೀಡುವವರಾಗಿ ಬೆಳೆಯಬೇಕು ಎಂದರು.

ಕೃಷಿ ಕ್ಷೇತ್ರದಲ್ಲಿ ಮೌಲ್ಯವರ್ಧನೆ ಹಾಗೂ ಅಭಿವೃದ್ಧಿಗೆ ವ್ಯಾಪಕ ಅವಕಾಶ ಇದೆ. ಕೃಷಿ ಪದವಿಧರರು ತಮ್ಮ ಕೌಶಲ್ಯವನ್ನು ಈ ಕ್ಷೇತ್ರದ ವಿಕಾಸಕ್ಕೆ ಬಳಸಬೇಕು ಸಲಹೆ ನೀಡಿದರು.

ಧಾರವಾಡ ಕೃಷಿ ವಿ.ವಿ ದೇಶದ ಶ್ರೇಷ್ಠ ವಿಶ್ವವಿದ್ಯಾಲಗಳಲ್ಲಿ ಒಂದಾಗಿದ್ದು ಹೊಸ ಹೊಸ ಸಂಶೋಧನೆಗಳ ಮೂಲಕ ಕೃಷಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿರುವುದು ಪ್ರಶಂಸನೀಯ. ವಿಶ್ವವಿದ್ಯಾಲಯಗಳು ರೈತರಿಗೆ ಆತ್ಮವಿಶ್ವಾಸ ತುಂಬುವ ಜೊತೆಗೆ ವೈಜ್ಞಾನಿಕ, ತಾಂತ್ರಿಕ ನೆರವು ಒದಗಿಸಬೇಕು ಎಂದು ಸೂಚನೆ ನೀಡಿದರು.

ರಾಜ್ಯ ಸರ್ಕಾರ ಸದಾ ರೈತ ಪರವಾಗಿದೆ. ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ಅನೇಕ‌ ಪರಿಣಾಮಕಾರಿ ಯೋಜನೆ ಜಾರಿ ತಂದಿದೆ ಎಂದು ಅವರು ವಿವರಿಸಿದರು.

ಸಿರಿ ಧಾನ್ಯಗಳ ಪ್ರೋತ್ಸಾಹ ಕಾರ್ಯಕ್ರಮಗಳಿಂದ ದೊಡ್ಡ ಯಶಸ್ಸು ಕಾಣುತ್ತಿದೆ. ನೂರಾರು ಹೊಸ ಉದ್ಯಮ ಪ್ರಾರಂಭವಾಗಿ ಹೀಗೆ ಎಲ್ಲಾ ಕೃಷಿ ಉತ್ಪನ್ನಗಳಲ್ಲಿ ಹೊಸ ಆವಿಷ್ಕಾರ ಮತ್ತು ಬ್ರಾಂಡಿಗ್ ಅಗಬೇಕಿದೆ ಎಂದು ಹೇಳಿದರು.

ಅಲ್ಲದೆ ಈ ವರ್ಷದ ಧಾರವಾಡ ಕೃಷಿ ವಿವಿ ವಿದ್ಯಾರ್ಥಿನಿ ಕುಮಾರಿ ಸೌಭಾಗ್ಯ ಬೀಳಗಿ‌ಮಠ ಯು.ಪಿ‌.ಎಸ್.ಸಿ ಪರೀಕ್ಷೆಯಲ್ಲಿ 101 ನೇ ರಾಂಕ್ ಗಳಿಸಿರುವುದು ರಾಜ್ಯಕ್ಕೆ ಹೆಮ್ಮೆ ತಂದಿದೆ ಎಂದು ಕೃಷಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಧಾರವಾಡದ ಕೃಷಿ ವಿ.ವಿಯ 37ನೇ ಘಟಿಕೊತ್ಸವದಲ್ಲಿ 69 ಪಿ.ಹೆಚ್.ಡಿ, 237 ಸ್ನಾತಕೋತ್ತರ ಹಾಗೂ 627 ಸ್ನಾತಕ ಪದವಿ ಸೇರಿದಂತೆ 933 ಅಭ್ಯರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

5 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

9 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

9 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

10 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

11 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

12 hours ago