ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಗುರಿಯಾಗಿದ್ದರು.
ಈ ಸಂಬಂಧ ಇಂದು ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ನನ್ನು ಬಂಧಿಸಿದ್ದಾರೆ.
ಬಂಧಿತ ಡ್ರೋನ್ ಪ್ರತಾಪ್ನನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನೀರಿಗೆ ಕೆಮಿಕಲ್ ಹಾಕಿ ಡ್ರೋನ್ ಪ್ರತಾಪ್ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾರೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ. ಅದರಲ್ಲಿ ಬೆಂಕಿ ಸಹ ಚಿಮ್ಮಿದೆ. ಇದನ್ನು ಪ್ರತಾಪ್ ವಿಡಿಯೋ ಸಹ ಮಾಡಿದ್ದರು. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್ನನ್ನು ಅರೆಸ್ಟ್ ಮಾಡಲಾಗಿದೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…