ಬೆಂಗಳೂರು: ಮುಂಬರುವ ಒಂದು ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್ಗಳನ್ನು ಆರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಕ್ಯಾನ್ಸರ್ ರೋಗಿಗಳು ಕಿಮೋಥೆರಪಿಗಾಗಿ ನಗರಗಳಿಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ನಾವು ಕೂಲಂಕುಷವಾಗಿ ಚರ್ಚೆ ನಡೆಸಿದ್ದು, ಜನರಿಗೆ ಅವರ ಜಿಲ್ಲೆಯಲ್ಲಿಯೇ ಕಿಮೋಥೆರಪಿ ಸೇವೆ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ಗಳನ್ನು ತೆರೆಯಲಾಗುವುದು. ಒಂದು ತಿಂಗಳ ಒಳಗಾಗಿ ಈ ಸೇವೆ ಲಭ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಮೂಲಕ ಕ್ಯಾನ್ಸರ್ ರೋಗಿಗಳು ದೂರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ದಣಿದು ಹೋಗುವುದು ತಪ್ಪಲಿದ್ದು, ಅವರ ಜಿಲ್ಲೆಗಳಲ್ಲೇ ಇರುವ ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥೆರಪಿ ಚಿಕಿತ್ಸೆ ದೊರಕಲಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…