ರಾಜ್ಯ

ಚನ್ನಗಿರಿ ಪ್ರಕರಣ: ಠಾಣೆಗೆ ಬಂದ ಏಳು ನಿಮಿಷದೊಳಗೆ ಯುವಕ ಸಾವು: ಜಿ.ಪರಮೇಶ್ವರ್‌

ಬೆಂಗಳೂರು: ದೂರೊಂದರ ವಿಚಾರಣೆಗಾಗಿ ದಾವಣಗೆರೆಯ ಚನ್ನಗಿರಿ ಠಾಣೆ ಪೊಲೀಸರು ಆದಿಲ್‌ ಎಂಬ ಯುವಕನನ್ನು ಠಾಣೆಗೆ ಕರೆತಂದ ಏಳು ನಿಮಿಷದೊಳಗೆ ಆ ಯುವಕ ಮೃತಪಟ್ಟಿದ್ದಾನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಯುವಕ ಮೃತಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೃತನ ವಿರುದ್ಧ ಠಾಣೆಯಲ್ಲಿ ದೂರೊಂದು ದಾಖಲಾಗಿತ್ತು. ಆ ಬಗ್ಗೆ ತನಿಖೆ ನಡೆಸಲು ಆತನನ್ನು ಠಾಣೆಗೆ ಕರೆತರಲಾಗಿತ್ತು. ಮೂರ್ಛೆ ರೋಗ ಇದ್ದ ಕಾರಣ ಆತ ಪೊಲೀಸರೆದುರೆ ಸಾವನ್ನಪ್ಪಿದ್ದಾನೆ. ಕುಟುಂಬದವರು ಅವನ ಸಾವಿಗೆ ಪೊಲೀಸರೆ ಕಾರಣ ಎಂದು ಆರೋಪಿಸುತ್ತಿದ್ದಾರೆ. ಆದರೆ ಮೃತ ಯುವಕನ ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಲಿದೆ ಎಂದರು.

ಪೊಲೀಸರ ಹಲ್ಲೆಯಿಂದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಭಾವಿಸಿ ಆತನ ಕಡೆಯವರು ಪ್ರತಿಭಟನೆ ಮಾಡಿ ಪೊಲೀಸ್ ಠಾಣೆಗೆ ನುಗ್ಗಿದ್ದಾರೆ. ಈ ವೇಳೆ ಟಿಯರ್ ಗ್ಯಾಸ್ ಬಳಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಕಲ್ಲು ತೂರಾಟದಿಂದ ಅಲ್ಲಿದ್ದವರಿಗೆ ಗಾಯಗಳಾಗಿವೆ ಎಂದು ವಿವರಿಸಿದರು.

ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ಮಾಡುವುದು, ತಲೆ ಕತ್ತರಿಸುತ್ತೇವೆ ಎಂದು ಪೋಲೀಸರಿಗೆ ಬೆದರಿಕೆ ಹಾಕುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಅಂತವರ ವಿರುದ್ಧ ಕಾನೂನಿನ ಪ್ರಕಾರ ಅಗತ್ಯವಾದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ವ್ಯಕ್ತಿಯ ಸಾವಿಗೆ ನಿಖರ ಕಾರಣಗಳೇನು ಎಂದು ತಿಳಿಯಲು ಶವಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅದರ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಅವರು, ಠಾಣೆಗೆ ಬಂದು ಧಮ್ಕಿ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಕೆಜೆ ಹಳ್ಳಿ, ಡಿಜೆ ಹಳ್ಳಿ ಮಾದರಿಯಲ್ಲಿ ಗಲಭೆ ಮಾಡಲು ಚನ್ನಗಿರಿಯಲ್ಲೂ ಸಂಚು ನಡೆದಿತ್ತು ಎಂಬುದನ್ನು ನಾನು ಕೇಳಿಸಿಕೊಂಡಿದ್ದೇನೆ ಎಂದು ಹೇಳಿದರು.

ಉಡುಪಿಯಲ್ಲಿನ ಗುಂಪು ಗಲಭೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು, ಅಲ್ಲಲ್ಲಿ ಗಲ್ಲಿಗಳಲ್ಲಿ ಸಣ್ಣಪುಟ್ಟ ಗಲಭೆಗಳಾದರೆ ಅದನ್ನು ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಪರಿಗಣಿಸಲಾಗುವುದಿಲ್ಲ. ಕ್ರಿಕೆಟ್ ಆಟದ ವೇಳೆ ಗಲಭೆಗಳಾಗುತ್ತವೆ ಎಂದು ಮೊದಲೇ ಮಾಹಿತಿ ಇರುವುದಿಲ್ಲ. ಗಲಾಟೆ ನಡೆದಾಗ ಅದನ್ನು ನಿಯಂತ್ರಣಕ್ಕೆ ತರಲಾಗುವುದು. ಗಲಭೆಕೋರರನ್ನು ಮುಕ್ತವಾಗಿ ಓಡಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago