ರಾಜ್ಯ

ಚನ್ನಗಿರಿ ಪ್ರಕರಣ: ಠಾಣೆಗೆ ಬಂದ ಏಳು ನಿಮಿಷದೊಳಗೆ ಯುವಕ ಸಾವು: ಜಿ.ಪರಮೇಶ್ವರ್‌

ಬೆಂಗಳೂರು: ದೂರೊಂದರ ವಿಚಾರಣೆಗಾಗಿ ದಾವಣಗೆರೆಯ ಚನ್ನಗಿರಿ ಠಾಣೆ ಪೊಲೀಸರು ಆದಿಲ್‌ ಎಂಬ ಯುವಕನನ್ನು ಠಾಣೆಗೆ ಕರೆತಂದ ಏಳು ನಿಮಿಷದೊಳಗೆ ಆ ಯುವಕ ಮೃತಪಟ್ಟಿದ್ದಾನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಯುವಕ ಮೃತಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೃತನ ವಿರುದ್ಧ ಠಾಣೆಯಲ್ಲಿ ದೂರೊಂದು ದಾಖಲಾಗಿತ್ತು. ಆ ಬಗ್ಗೆ ತನಿಖೆ ನಡೆಸಲು ಆತನನ್ನು ಠಾಣೆಗೆ ಕರೆತರಲಾಗಿತ್ತು. ಮೂರ್ಛೆ ರೋಗ ಇದ್ದ ಕಾರಣ ಆತ ಪೊಲೀಸರೆದುರೆ ಸಾವನ್ನಪ್ಪಿದ್ದಾನೆ. ಕುಟುಂಬದವರು ಅವನ ಸಾವಿಗೆ ಪೊಲೀಸರೆ ಕಾರಣ ಎಂದು ಆರೋಪಿಸುತ್ತಿದ್ದಾರೆ. ಆದರೆ ಮೃತ ಯುವಕನ ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಲಿದೆ ಎಂದರು.

ಪೊಲೀಸರ ಹಲ್ಲೆಯಿಂದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಭಾವಿಸಿ ಆತನ ಕಡೆಯವರು ಪ್ರತಿಭಟನೆ ಮಾಡಿ ಪೊಲೀಸ್ ಠಾಣೆಗೆ ನುಗ್ಗಿದ್ದಾರೆ. ಈ ವೇಳೆ ಟಿಯರ್ ಗ್ಯಾಸ್ ಬಳಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಕಲ್ಲು ತೂರಾಟದಿಂದ ಅಲ್ಲಿದ್ದವರಿಗೆ ಗಾಯಗಳಾಗಿವೆ ಎಂದು ವಿವರಿಸಿದರು.

ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ಮಾಡುವುದು, ತಲೆ ಕತ್ತರಿಸುತ್ತೇವೆ ಎಂದು ಪೋಲೀಸರಿಗೆ ಬೆದರಿಕೆ ಹಾಕುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಅಂತವರ ವಿರುದ್ಧ ಕಾನೂನಿನ ಪ್ರಕಾರ ಅಗತ್ಯವಾದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ವ್ಯಕ್ತಿಯ ಸಾವಿಗೆ ನಿಖರ ಕಾರಣಗಳೇನು ಎಂದು ತಿಳಿಯಲು ಶವಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅದರ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಅವರು, ಠಾಣೆಗೆ ಬಂದು ಧಮ್ಕಿ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಕೆಜೆ ಹಳ್ಳಿ, ಡಿಜೆ ಹಳ್ಳಿ ಮಾದರಿಯಲ್ಲಿ ಗಲಭೆ ಮಾಡಲು ಚನ್ನಗಿರಿಯಲ್ಲೂ ಸಂಚು ನಡೆದಿತ್ತು ಎಂಬುದನ್ನು ನಾನು ಕೇಳಿಸಿಕೊಂಡಿದ್ದೇನೆ ಎಂದು ಹೇಳಿದರು.

ಉಡುಪಿಯಲ್ಲಿನ ಗುಂಪು ಗಲಭೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು, ಅಲ್ಲಲ್ಲಿ ಗಲ್ಲಿಗಳಲ್ಲಿ ಸಣ್ಣಪುಟ್ಟ ಗಲಭೆಗಳಾದರೆ ಅದನ್ನು ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಪರಿಗಣಿಸಲಾಗುವುದಿಲ್ಲ. ಕ್ರಿಕೆಟ್ ಆಟದ ವೇಳೆ ಗಲಭೆಗಳಾಗುತ್ತವೆ ಎಂದು ಮೊದಲೇ ಮಾಹಿತಿ ಇರುವುದಿಲ್ಲ. ಗಲಾಟೆ ನಡೆದಾಗ ಅದನ್ನು ನಿಯಂತ್ರಣಕ್ಕೆ ತರಲಾಗುವುದು. ಗಲಭೆಕೋರರನ್ನು ಮುಕ್ತವಾಗಿ ಓಡಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

34 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

48 mins ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

54 mins ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

11 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago