ಚಿಕ್ಕಬಳ್ಳಾಪುರ: ವಾಂತಿ ಭೇದಿಯಿಂದ ಬಳಲಿ ಒಂದೇ ಗ್ರಾಮ ನಾಲ್ಕು ಜನರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೀರಪಲ್ಲಿ ಗ್ರಾಮದಲ್ಲಿ ನಡೆದಿದೆ.
ಕಲುಷಿತ ನೀರು ಸೇವೆನೆಯಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಐದುನೈದು ದಿನಗಳಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಡುಬಿಟ್ಟಿದ್ದು, ಆರೋಗ್ಯ ಸಿಬ್ಬಂದಿಗಳು ಮನೆಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಜೊತೆಗೆ ಆರೋಗ್ಯ ಇಲಾಖೆ ಗ್ರಾಮದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ತೆರೆದಿದೆ.
ಗ್ರಾಮದಲ್ಲಿ ಬಹುತೇಕ ಕುಡಿಯುವ ನೀರಿನ ಪೈಪ್ಗಳನ್ನು ಒಳ ಚರಂಡಿಗಳಲ್ಲಿ ಅಳವಡಿಸಲಾಗಿದೆ. ಚರಂಡಿಗಳಲ್ಲೇ ಕುಡಿಯುವ ನೀರಿನ ಪೈಪ್ಗಳನ್ನು ದುರಸ್ಥಿ ಮಾಡಲಾಗುತ್ತದೆ. ಚರಂಡಿ ನೀರು ಕುಡಿಯುವ ನೀರಿನ ಪೈಪ್ಗೆ ಸೇರಿದೆ. ಈ ಕಲುಷಿತ ನೀರು ಸೇವಿಸಿದ ಗ್ರಾಮದ ಕೆಲವರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಕಳೆದ 15 ದಿನಗಳಿಂದ ಗ್ರಾಮದ ಗಂಗಮ್ಮ(70), ಮುನಿನಾಗಮ್ಮ(70) ಲಕ್ಷ್ಮಮ್ಮ(70) ಹಾಗೂ ನರಸಿಂಹಪ್ಪ(75) ವಾಂತಿ ಭೇದಿಯಿಂದ ಬಳಲಿ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡಿಲ್ಲವೆಂದು ಗ್ರಾಮ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…